ಮೈಸೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬಣದ 38ಮಾಜಿ ಸಚಿವ-ಶಾಸಕರ ತಂಡವು ಶನಿವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಶಕ್ತಿ ಪ್ರದರ್ಶನ ನಡೆಸಿದೆ.
ಎಂ.ಪಿ ರೇಣುಕಾಚಾರ್ಯ ನೇತೃತ್ವದ ಈ ನಿಯೋಗವು ಬಳಿಕ ನಗರದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿದೆ. ಈ ವೇಳೆ ಕಾರ್ಯಕರ್ತರು, ಬಿಜೆಪಿಯ ಭಿನ್ನ ಬಣದ ನಾಯಕ ಬಸವನಗೌಡ ಪಾಟೀಲ ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯತ್ನಾಳ್ ಒಬ್ಬ ಮುಖವಾಡ ಹಾಕಿಕೊಂಡಿರುವ ಹಿಂದೂತ್ವದ ನಾಯಕ. ಬಿಜೆಪಿ ರಾಜ್ಯ ನಾಯಕರ ವಿರುದ್ದ ಹಗುರವಾಗಿ ಮಾತನಾಡೋ ಯತ್ನಾಳ್ ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಎಂದು ಕಾರ್ಯಕರ್ತರು ಸುದ್ದಿಗೋಷ್ಠಿ ನಡುವೆಯೇ ರೊಚ್ಚಿಗೆದ್ದರು.
ಯಡಿಯೂರಪ್ಪನವರು ರಾಜ್ಯದಲ್ಲಿ ದುಡಿದು ಪಕ್ಷ ಕಟ್ಟಿದ್ದಾರೆ. ಅವರ ವಿರುದ್ದ ಏಕವಚನದಲ್ಲಿ ಮಾತನಾಡ್ತಾನೆ. ಆತನನ್ನು ಪಕ್ಷದಿಂದ ಉಚ್ಚಾಟನೆ ಮಾಡಿ. ಆತನಿಂದ ನಮಗೆ ಯಾವುದೆ ಲಾಭ ಇಲ್ಲ. ಬದಲಿಗೆ ನಮಗೆ ನಷ್ಟ, ನಮ್ಮ ಹಿಂದುತ್ವಕ್ಕೆ ನಷ್ಟ. ಆತನಿಂದ ಕಾರ್ಯಕರ್ತರಿಗೆ ನೋವಾಗಿದೆ ಎಂದು ಯತ್ನಾಳ್ ವಿರುದ್ಧ ಏಕವಚನದಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…