ಮೈಸೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬಣದ 38ಮಾಜಿ ಸಚಿವ-ಶಾಸಕರ ತಂಡವು ಶನಿವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಶಕ್ತಿ ಪ್ರದರ್ಶನ ನಡೆಸಿದೆ.
ಎಂ.ಪಿ ರೇಣುಕಾಚಾರ್ಯ ನೇತೃತ್ವದ ಈ ನಿಯೋಗವು ಬಳಿಕ ನಗರದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿದೆ. ಈ ವೇಳೆ ಕಾರ್ಯಕರ್ತರು, ಬಿಜೆಪಿಯ ಭಿನ್ನ ಬಣದ ನಾಯಕ ಬಸವನಗೌಡ ಪಾಟೀಲ ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯತ್ನಾಳ್ ಒಬ್ಬ ಮುಖವಾಡ ಹಾಕಿಕೊಂಡಿರುವ ಹಿಂದೂತ್ವದ ನಾಯಕ. ಬಿಜೆಪಿ ರಾಜ್ಯ ನಾಯಕರ ವಿರುದ್ದ ಹಗುರವಾಗಿ ಮಾತನಾಡೋ ಯತ್ನಾಳ್ ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಎಂದು ಕಾರ್ಯಕರ್ತರು ಸುದ್ದಿಗೋಷ್ಠಿ ನಡುವೆಯೇ ರೊಚ್ಚಿಗೆದ್ದರು.
ಯಡಿಯೂರಪ್ಪನವರು ರಾಜ್ಯದಲ್ಲಿ ದುಡಿದು ಪಕ್ಷ ಕಟ್ಟಿದ್ದಾರೆ. ಅವರ ವಿರುದ್ದ ಏಕವಚನದಲ್ಲಿ ಮಾತನಾಡ್ತಾನೆ. ಆತನನ್ನು ಪಕ್ಷದಿಂದ ಉಚ್ಚಾಟನೆ ಮಾಡಿ. ಆತನಿಂದ ನಮಗೆ ಯಾವುದೆ ಲಾಭ ಇಲ್ಲ. ಬದಲಿಗೆ ನಮಗೆ ನಷ್ಟ, ನಮ್ಮ ಹಿಂದುತ್ವಕ್ಕೆ ನಷ್ಟ. ಆತನಿಂದ ಕಾರ್ಯಕರ್ತರಿಗೆ ನೋವಾಗಿದೆ ಎಂದು ಯತ್ನಾಳ್ ವಿರುದ್ಧ ಏಕವಚನದಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…
ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…