ಮೈಸೂರು: ನಗರದ ಹುಣಸೂರು ರಸ್ತೆಯ ಪಡುವಾರಹಳ್ಳಿ ಜಂಕ್ಷನ್ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಈ ಅಪಘಾತದಲ್ಲಿ ಸಾವನ್ನಪ್ಪಿದ ಮೃತ ದುರ್ದೈವಿಯನ್ನು ಗೋಕುಲಂ ನಿವಾಸಿ ಕಾರ್ತಿಕ್(27) ಗುರುತಿಸಲಾಗಿದೆ.
ಈ ದುರಂತ ಕಾರ್ತಿಕ್ ಬೈಕ್ಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮದಿಂದ ಹೆಲ್ಮಟ್ ಹಾಕಿ ಸ್ಟ್ರಿಪ್ ಹಾಕದ ಹಿನ್ನೆಲೆ ಕಾರ್ತಿಕ್ ತಲೆಗೆ ಗಂಭೀರ ಗಾಯವಾಗಿದೆ. ಬಳಿಕ ಗಾಯಗೊಂಡ ಕಾರ್ತಿಕ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಾರ್ತಿಕ್ ಸಾವನ್ನಪ್ಪಿದ್ದಾನೆ.
ಇನ್ನು ಈ ಪ್ರಕರಣದ ಸಂಬಂಧ ವಾಣಿ ವಿಲಾಸ ಮೊಹಲ್ಲಾ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





