ಮೈಸೂರು

ʼಮೈಸೂರು ಚಲೋʼಗೆ ಸಮಾರೋಪ ಇಂದು; ಸಿಎಂ ತವರಲ್ಲಿ ದೋಸ್ತಿಗಳ ಸವಾಲ್‌

ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸಿನ ಶಕ್ತಿ ಪ್ರದರ್ಶನ ನಡೆದ ಮೈದಾನದಲ್ಲಿಯೇ ಇಂದು(ಆ.10) ಬಿಜೆಪಿ-ಜೆಡಿಎಸ್‌ ಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಬೃಹತ್‌ ವೇದಿಕೆ ಸಜ್ಜಾಗಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಹಾಗೂ ಸರ್ಕಾರದ ಹಗರಣಗಳ ಕುರಿತು ಆ.3 ರಂದು ಬೆಂಗಳೂರಿನ ಕೆಂಗೇರಿ ಸಮೀಪ ಬಿಜೆಪಿ-ಜೆಡಿಎಸ್‌ ಆರಂಭಿಸಿದ ಪಾದಯಾತ್ರೆ ಆ.9ರ ಸಂಜೆ ಮೈಸೂರು ತಲುಪಿದ್ದು, ಇಂದು(ಆ.10) ನಡೆಯುವ ಬೃಹತ್‌ ಸಮಾವೇಶದೊಂದಿಗೆ ಪಾದಯಾತ್ರೆ ಪೂರ್ಣಗೊಳ್ಳಲಿದೆ.

ನಿನ್ನೆ(ಆ.10)ನಡೆದ ಕಾಂಗ್ರೆಸ್‌ನ ಜನಾಂದೋಲದಲ್ಲಿ ಸಿಎಂ,ಡಿಸಿಎಂ ಹಾಗೂ ಸಚಿವರು ಮೈತ್ರಿ ಪಕ್ಷಗಳಿಗೆ ವಾಗ್ದಾಳಿ ನಡೆಸಿದ ರೀತಿಯಲ್ಲೇ ವಿಪಕ್ಷಗಳು ಕೂಡ ವಾಗ್ದಾಳಿ ನಡೆಸಲು ರಣತಂತ್ರ ರೂಪಿಸಿದ್ದಾರೆ.

ಇಂದಿನ ದೋಸ್ತಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ವಿರುದ್ಧ ರಣಕಹಳೆ ಮೊಳಗಲಿದೆ. ಜೊತೆಗೆ ಕಾಂಗ್ರೆಸ್‌ ಅಕ್ರಮದ ಬಗ್ಗೆ ಇನ್ನಷ್ಟು ಗಟ್ಟಿ ಧ್ವನಿಯಲ್ಲಿ ಟೀಕೆಪ್ರಹಾರ ನಡೆಸುವ ಸಾಧ್ಯತೆಯಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…

1 min ago

ಓದುಗರ ಪತ್ರ: ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಿ

ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…

12 mins ago

ವಿಕಸಿತ್ ಭಾರತ್- ಜಿ ರಾಮ್ ಜಿ: ಮಹಾತ್ಮನನ್ನು ಮರೆಗೆ ಸರಿಸುವ ಹುನ್ನಾರ

ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…

16 mins ago

ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ, ಟ್ರೋಫಿ

ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ…

59 mins ago

ಡಿ.26ರಿಂದ ಕೊಡವ ಹಾಕಿ ಚಾಂಪಿಯನ್ ಟ್ರೋಫಿ

ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…

3 hours ago

ಡಿ.21ರಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…

3 hours ago