Mysore
24
overcast clouds

Social Media

ಮಂಗಳವಾರ, 19 ಮೇ 2026
Light
Dark

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ.

ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ ಒಟ್ಟು 16 ವಾಹನಗಳನ್ನು ಸನ್ನದ್ಧವಾಗಿಡಲಾಗಿದೆ. ವಾಹನದಲ್ಲಿ ವಿದ್ಯುತ್ ಕಂಬ ಬಿದ್ದಲ್ಲಿ, ಸಂಪರ್ಕ ಕಡಿತವಾದಲ್ಲಿ, ವಿದ್ಯುತ್ ತಂತಿಗಳ ಮೇಲೆ ಮರದ ಕೊಂಬೆಗಳು ಬಿದ್ದಲ್ಲಿ ತಕ್ಷಣವೇ ತೆರವುಗೊಳಿಸಲು ಬೇಕಾದ ಅಗತ್ಯ ಸಾಧನಗಳು ವಾಹನದಲ್ಲಿ ಇರಲಿವೆ. ಇದರ ಜೊತೆಗೆ ವಾಹನ ಒಂದರಲ್ಲಿ ನಾಲ್ಕು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಈ ವಾಹನಗಳು ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸಲಿವೆ. ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಎದುರಾದಲ್ಲಿ ತಕ್ಷಣವೇ 1912 ಸಂಖ್ಯೆಗೆ ಮಾಹಿತಿ ನೀಡಬಹುದು ಎಂದು ಚೆಸ್ಕಾಂ ತಾಂತ್ರಿಕ ವಿಧಾಗದ ನಿರ್ದೇಶಕಿ ಶರಣಮ್ಮ ತಿಳಿಸಿದ್ದಾರೆ.

Tags:
error: Content is protected !!