ಮೈಸೂರು : ಮೈಸೂರು ರಂಗಾಯಣದ ವತಿಯಿಂದ ಏಪ್ರಿಲ್ 14 ರಿಂದ ಮೇ 10 ರವರೆಗೆ ʻಚಿಣ್ಣರ ಮೇಳʼವನ್ನು ರಂಗಾಯಣದ ಆವರಣದಲ್ಲಿ ನಡೆಸಲು ಯೋಜಿಸಲಾಗಿದ್ದು, ಮಕ್ಕಳ ರಂಗ ತರಬೇತಿ ಶಿಬಿರಕ್ಕೆ ಅರ್ಜಿ ವಿತರಣೆ ಮಾಡಲಾಗುತ್ತಿದೆ.
2025 ಮಾರ್ಚ್ 31 ಕ್ಕೆ 7 ವರ್ಷಗಳು ತುಂಬಿದ ಮತ್ತು ಈ ದಿನಾಂಕಕ್ಕೆ 15 ವರ್ಷ ಮೀರಿರದ ಮಕ್ಕಳಿಗೆ ಮಾತ್ರ ಪ್ರವೇಶ ನೀಡಲಾಗುವುದು. ಏಪ್ರಿಲ್ 06 ರಂದು ಬೆಳಿಗ್ಗೆ 10 ಗಂಟೆಗೆ ರಂಗಾಯಣದ ಕಚೇರಿಯಲ್ಲಿ ಒಬ್ಬರಿಗೆ ಒದರಂತೆ ಅರ್ಜಿ ವಿತರಿಸಲಾಗುವುದು.
ಪ್ರತಿ ಅರ್ಜಿಯ ಶುಲ್ಕ ರೂ. 100/- ಗಳಾಗಿದ್ದು, 250 ಅರ್ಜಿಗಳನ್ನು ಮಾತ್ರ ನೀಡಲಾಗುವುದು. ಮೊದಲು ಬಂದವರಿಗ ಮೊದಲ ಆದ್ಯತೆ ಸಿಗಲಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಏಪ್ರಿಲ್ 09 ಸಂಜೆ 05 ಗಂಟೆಯೊಳಗೆ ರಂಗಾಯಣದ ಕಛೇರಿಗೆ ಖುದ್ದಾಗಿ ಸಲ್ಲಿಸಬೇಕು. ಚಿಣ್ಣರ ಮೇಳದ ಪ್ರವೇಶ ಶುಲ್ಕ ಮಗುವೊಂದಕ್ಕೆ ರೂ.3,500/- ಗಳ ಈ ಮೊತ್ತವನ್ನು ಉಪನಿರ್ದೇಶಕರು, ರಂಗಾಯಣ ಮೈಸೂರು ಇವರ ಹೆಸರಿಗೆ ಡಿ.ಡಿ ತೆಗೆದು ಅರ್ಜಿ ಜೊತೆ ಲಗತ್ತಿಸುವುದು.
ಮಗುವಿನ ಜನ್ಮದಿನದ ದೃಢೀಕರಣಕ್ಕಾಗಿ ಆಧಾರ್ ಕಾರ್ಡ್ ಪ್ರತಿ ಅಥವಾ ಮಗುವಿನ ಹೆಸರು ನಮೂದಿಸಿರುವ ಜನನ ಪ್ರಮಾಣಪತ್ರವನ್ನು ಅರ್ಜಿ ಜೊತೆ ಲಗತ್ತಿಸಬೇಕು. ಅರ್ಜಿಯಲ್ಲಿ ಮತ್ತು ರಸೀದಿಯಲ್ಲಿ ಕಡ್ಡಾಯವಾಗಿ ಮಗುವಿನ ಹೆಸರನ್ನು ಬರೆಸಿ ರೂ. 100/- ಗಳನ್ನು ಪಾವತಿಸಿ ರಸೀದಿಯೊಂದಿಗೆ ಅರ್ಜಿಯನ್ನು ಪಡೆಯುವುದು ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ರಸೀದಿಯೊಂದಿಗೆ ಮರಳಿ ಸಲ್ಲಿಸಬೇಕು ಎಂದು ರಂಗಾಯಣದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…