ಮೈಸೂರು : ಮೈಸೂರು ರಂಗಾಯಣದ ವತಿಯಿಂದ ಏಪ್ರಿಲ್ 14 ರಿಂದ ಮೇ 10 ರವರೆಗೆ ʻಚಿಣ್ಣರ ಮೇಳʼವನ್ನು ರಂಗಾಯಣದ ಆವರಣದಲ್ಲಿ ನಡೆಸಲು ಯೋಜಿಸಲಾಗಿದ್ದು, ಮಕ್ಕಳ ರಂಗ ತರಬೇತಿ ಶಿಬಿರಕ್ಕೆ ಅರ್ಜಿ ವಿತರಣೆ ಮಾಡಲಾಗುತ್ತಿದೆ.
2025 ಮಾರ್ಚ್ 31 ಕ್ಕೆ 7 ವರ್ಷಗಳು ತುಂಬಿದ ಮತ್ತು ಈ ದಿನಾಂಕಕ್ಕೆ 15 ವರ್ಷ ಮೀರಿರದ ಮಕ್ಕಳಿಗೆ ಮಾತ್ರ ಪ್ರವೇಶ ನೀಡಲಾಗುವುದು. ಏಪ್ರಿಲ್ 06 ರಂದು ಬೆಳಿಗ್ಗೆ 10 ಗಂಟೆಗೆ ರಂಗಾಯಣದ ಕಚೇರಿಯಲ್ಲಿ ಒಬ್ಬರಿಗೆ ಒದರಂತೆ ಅರ್ಜಿ ವಿತರಿಸಲಾಗುವುದು.
ಪ್ರತಿ ಅರ್ಜಿಯ ಶುಲ್ಕ ರೂ. 100/- ಗಳಾಗಿದ್ದು, 250 ಅರ್ಜಿಗಳನ್ನು ಮಾತ್ರ ನೀಡಲಾಗುವುದು. ಮೊದಲು ಬಂದವರಿಗ ಮೊದಲ ಆದ್ಯತೆ ಸಿಗಲಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಏಪ್ರಿಲ್ 09 ಸಂಜೆ 05 ಗಂಟೆಯೊಳಗೆ ರಂಗಾಯಣದ ಕಛೇರಿಗೆ ಖುದ್ದಾಗಿ ಸಲ್ಲಿಸಬೇಕು. ಚಿಣ್ಣರ ಮೇಳದ ಪ್ರವೇಶ ಶುಲ್ಕ ಮಗುವೊಂದಕ್ಕೆ ರೂ.3,500/- ಗಳ ಈ ಮೊತ್ತವನ್ನು ಉಪನಿರ್ದೇಶಕರು, ರಂಗಾಯಣ ಮೈಸೂರು ಇವರ ಹೆಸರಿಗೆ ಡಿ.ಡಿ ತೆಗೆದು ಅರ್ಜಿ ಜೊತೆ ಲಗತ್ತಿಸುವುದು.
ಮಗುವಿನ ಜನ್ಮದಿನದ ದೃಢೀಕರಣಕ್ಕಾಗಿ ಆಧಾರ್ ಕಾರ್ಡ್ ಪ್ರತಿ ಅಥವಾ ಮಗುವಿನ ಹೆಸರು ನಮೂದಿಸಿರುವ ಜನನ ಪ್ರಮಾಣಪತ್ರವನ್ನು ಅರ್ಜಿ ಜೊತೆ ಲಗತ್ತಿಸಬೇಕು. ಅರ್ಜಿಯಲ್ಲಿ ಮತ್ತು ರಸೀದಿಯಲ್ಲಿ ಕಡ್ಡಾಯವಾಗಿ ಮಗುವಿನ ಹೆಸರನ್ನು ಬರೆಸಿ ರೂ. 100/- ಗಳನ್ನು ಪಾವತಿಸಿ ರಸೀದಿಯೊಂದಿಗೆ ಅರ್ಜಿಯನ್ನು ಪಡೆಯುವುದು ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ರಸೀದಿಯೊಂದಿಗೆ ಮರಳಿ ಸಲ್ಲಿಸಬೇಕು ಎಂದು ರಂಗಾಯಣದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…