ಮೈಸೂರು

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು.

ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿರುವ ಕ್ರೈಸ್ತ ದೇವಾಲಯಗಳಲ್ಲಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಯೇಸುಕ್ರಿಸ್ತನನ್ನು ಪೂಜಿಸಲಾಯಿತು. ಕ್ರೈಸ್ತ ಬಾಂಧವರು ಬುಧವಾರ ರಾತ್ರಿಯಿಂದಲೇ ಚರ್ಚ್‌ಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಸಂತ ಫಿಲೋಮಿನಾ ಚರ್ಚ್‌ನಲ್ಲಿ ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಡಾ.ಫ್ರಾನ್ಸಿಸ್ ಸೆರಾವ್ ಸಮ್ಮುಖದಲ್ಲಿ ಮಿಡ್‌ನೈಟ್ ಮಾಸ್ ನಡೆಯಿತು. ಬುಧವಾರ ರಾತ್ರಿ ೧೧ ಗಂಟೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾದವು. ನಂತರ ರಾತ್ರಿಯಿಡೀ ವಿವಿಧ ಪೂಜಾ ವಿಧಿವಿಧಾನಗಳು ನೆರವೇರಿದವು. ಜತೆಗೆ ಕರೋಲ್ ಗೀತೆಗಳನ್ನೂ ಹಾಡಲಾಯಿತು. ಡಾ.ಫ್ರಾನ್ಸಿಸ್ ಸೆರಾವ್ ಕ್ರಿಸ್‌ಮಸ್ ಸಂದೇಶ ನೀಡಿದರು. ವಿಶ್ವ ಶಾಂತಿ, ನೆಮ್ಮದಿಯಿಂದ ಬಾಳುವಂತಾಗಲಿ ಎಂದು ಪ್ರಾರ್ಥಿಸಿದರು.

ಇದನ್ನು ಓದಿ: ಎಲ್ಲೆಡೆ ಕ್ರಿಸ್‌ಮಸ್ ಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ

ಗುರುವಾರ ಬೆಳಗ್ಗೆ ೫ ಗಂಟೆಯಿಂದ ರಾತ್ರಿ ೯ ಗಂಟೆವರೆಗೆ ಪ್ರತಿ ಒಂದು ಗಂಟೆಗೊಮ್ಮೆ ವಿಶೇಷ ಪೂಜೆ ಸಲ್ಲಿಸಲಾಯಿತು. ಚರ್ಚ್ ಕಾಂಪೌಂಡ್ ಆವರಣದಲ್ಲಿ ಎಲ್‌ಇಡಿ ಪರದೆ ಅಳವಡಿಸಿ ಪ್ರಾರ್ಥನೆ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಪ್ರಾರ್ಥನೆ ಸಲ್ಲಿಸಿದ ಬಳಿಕ ಕ್ರೈಸ್ತ ಬಾಂಧವರು ಯೇಸು, ಸಂತ ಜೋಸೆಫ್, ಸಂತ ಮೇರಿ ಪ್ರತಿಮೆ ಎದುರು ಮೇಣದ ಬತ್ತಿಗಳನ್ನು ಹಚ್ಚಿ ಪ್ರಾರ್ಥನೆ ಸಲ್ಲಿಸಿ ಯೇಸು ಕ್ರಿಸ್ತನ ಸ್ಮರಣೆ ಮಾಡಿದರು.

ಚರ್ಚಿನ ಹೊರಭಾಗದಲ್ಲಿ ಗೋದಲಿಯನ್ನು ನಿರ್ಮಿಸಿದ್ದು, ಬುಧವಾರ ರಾತ್ರಿಯೇ ಬಾಲ ಯೇಸುವಿನ ಮೂರ್ತಿಯನ್ನು ಧರ್ಮಾಧ್ಯಕ್ಷ ಡಾ.ಫ್ರಾನ್ಸಿಸ್ ಸೆರಾವ್ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ್ದರು. ಇವರಿಗೆ ಚರ್ಚ್‌ನ ಗುರುಗಳು ಸಾಥ್ ನೀಡಿದರು. ಗೋದಲಿಯ ಪಕ್ಕದಲ್ಲಿ ಸುಂದರವಾದ ಸಂತ ಕ್ಲಾಸ್‌ನನ್ನು ನಿರ್ಮಿಸಲಾಗಿದ್ದು ಎಲ್ಲರ ಗಮನ ಸೆಳೆಯಿತು. ಇಸ್ರೆಲ್‌ನ ಬೆತ್ಲೆಹೆಮ್‌ನ ಕೊಟ್ಟಿಗೆಯೊಂದರಲ್ಲಿ ಜನ್ಮಪಡೆದ ಬಾಲ ಯೇಸು ಬೊಂಬೆ, ಯೇಸುವಿನ ತಂದೆ ಜೋಸೆಫ್, ತಾಯಿ ಮೇರಿ ಬೊಂಬೆಗಳ ಜತೆಗೆ ಕುರಿ, ಹಸು, ಒಂಟೆ ಇನ್ನಿತರ ಪ್ರಾಣಿಗಳ ಗೊಂಬೆಗಳು ಕಣ್ಮನ ಸೆಳೆದವು.

ಆಂದೋಲನ ಡೆಸ್ಕ್

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

2 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

3 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

4 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

4 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

4 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

5 hours ago