ಮೈಸೂರು

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು.

ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿರುವ ಕ್ರೈಸ್ತ ದೇವಾಲಯಗಳಲ್ಲಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಯೇಸುಕ್ರಿಸ್ತನನ್ನು ಪೂಜಿಸಲಾಯಿತು. ಕ್ರೈಸ್ತ ಬಾಂಧವರು ಬುಧವಾರ ರಾತ್ರಿಯಿಂದಲೇ ಚರ್ಚ್‌ಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಸಂತ ಫಿಲೋಮಿನಾ ಚರ್ಚ್‌ನಲ್ಲಿ ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಡಾ.ಫ್ರಾನ್ಸಿಸ್ ಸೆರಾವ್ ಸಮ್ಮುಖದಲ್ಲಿ ಮಿಡ್‌ನೈಟ್ ಮಾಸ್ ನಡೆಯಿತು. ಬುಧವಾರ ರಾತ್ರಿ ೧೧ ಗಂಟೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾದವು. ನಂತರ ರಾತ್ರಿಯಿಡೀ ವಿವಿಧ ಪೂಜಾ ವಿಧಿವಿಧಾನಗಳು ನೆರವೇರಿದವು. ಜತೆಗೆ ಕರೋಲ್ ಗೀತೆಗಳನ್ನೂ ಹಾಡಲಾಯಿತು. ಡಾ.ಫ್ರಾನ್ಸಿಸ್ ಸೆರಾವ್ ಕ್ರಿಸ್‌ಮಸ್ ಸಂದೇಶ ನೀಡಿದರು. ವಿಶ್ವ ಶಾಂತಿ, ನೆಮ್ಮದಿಯಿಂದ ಬಾಳುವಂತಾಗಲಿ ಎಂದು ಪ್ರಾರ್ಥಿಸಿದರು.

ಇದನ್ನು ಓದಿ: ಎಲ್ಲೆಡೆ ಕ್ರಿಸ್‌ಮಸ್ ಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ

ಗುರುವಾರ ಬೆಳಗ್ಗೆ ೫ ಗಂಟೆಯಿಂದ ರಾತ್ರಿ ೯ ಗಂಟೆವರೆಗೆ ಪ್ರತಿ ಒಂದು ಗಂಟೆಗೊಮ್ಮೆ ವಿಶೇಷ ಪೂಜೆ ಸಲ್ಲಿಸಲಾಯಿತು. ಚರ್ಚ್ ಕಾಂಪೌಂಡ್ ಆವರಣದಲ್ಲಿ ಎಲ್‌ಇಡಿ ಪರದೆ ಅಳವಡಿಸಿ ಪ್ರಾರ್ಥನೆ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಪ್ರಾರ್ಥನೆ ಸಲ್ಲಿಸಿದ ಬಳಿಕ ಕ್ರೈಸ್ತ ಬಾಂಧವರು ಯೇಸು, ಸಂತ ಜೋಸೆಫ್, ಸಂತ ಮೇರಿ ಪ್ರತಿಮೆ ಎದುರು ಮೇಣದ ಬತ್ತಿಗಳನ್ನು ಹಚ್ಚಿ ಪ್ರಾರ್ಥನೆ ಸಲ್ಲಿಸಿ ಯೇಸು ಕ್ರಿಸ್ತನ ಸ್ಮರಣೆ ಮಾಡಿದರು.

ಚರ್ಚಿನ ಹೊರಭಾಗದಲ್ಲಿ ಗೋದಲಿಯನ್ನು ನಿರ್ಮಿಸಿದ್ದು, ಬುಧವಾರ ರಾತ್ರಿಯೇ ಬಾಲ ಯೇಸುವಿನ ಮೂರ್ತಿಯನ್ನು ಧರ್ಮಾಧ್ಯಕ್ಷ ಡಾ.ಫ್ರಾನ್ಸಿಸ್ ಸೆರಾವ್ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ್ದರು. ಇವರಿಗೆ ಚರ್ಚ್‌ನ ಗುರುಗಳು ಸಾಥ್ ನೀಡಿದರು. ಗೋದಲಿಯ ಪಕ್ಕದಲ್ಲಿ ಸುಂದರವಾದ ಸಂತ ಕ್ಲಾಸ್‌ನನ್ನು ನಿರ್ಮಿಸಲಾಗಿದ್ದು ಎಲ್ಲರ ಗಮನ ಸೆಳೆಯಿತು. ಇಸ್ರೆಲ್‌ನ ಬೆತ್ಲೆಹೆಮ್‌ನ ಕೊಟ್ಟಿಗೆಯೊಂದರಲ್ಲಿ ಜನ್ಮಪಡೆದ ಬಾಲ ಯೇಸು ಬೊಂಬೆ, ಯೇಸುವಿನ ತಂದೆ ಜೋಸೆಫ್, ತಾಯಿ ಮೇರಿ ಬೊಂಬೆಗಳ ಜತೆಗೆ ಕುರಿ, ಹಸು, ಒಂಟೆ ಇನ್ನಿತರ ಪ್ರಾಣಿಗಳ ಗೊಂಬೆಗಳು ಕಣ್ಮನ ಸೆಳೆದವು.

ಆಂದೋಲನ ಡೆಸ್ಕ್

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

7 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

7 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

8 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

9 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

9 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

9 hours ago