ಮೈಸೂರು

ಸ್ವಚ್ಛ ಸರ್ವೇಕ್ಷಣ್‌ ಅಭಿಯಾನ ರಾಯಭಾರಿಗಳಾಗಿ ವಿವಿಧ ಕ್ಷೇತ್ರಗಳ ಸಾಧಕರ ನೇಮಕ: ಮೈ.ಮ.ಪಾಲಿಕೆ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪ್ರಸಕ್ತ ಸಾಲಿನ ಸ್ವಚ್ಛ ಸರ್ವೇಕ್ಷಣ್‌ ಅಭಿಯಾನ-2024ರಲ್ಲಿ ಮೈಸೂರು ಉತ್ತಮ ಶ್ರೇಯಾಂಕ ಪಡೆಯುವ ಉದ್ದೇಶದಿಂದ ವಿವಿಧ ಕ್ಷೇತ್ರಗಳ ಸಾಧಕರನ್ನು ರಾಯಭಾರಿಗಳಾಗಿ ನೇಮಿಸಲಾಗಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು 2014 ರಿಂದ ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆ ನಡೆಸುತ್ತಿದೆ. ಇಲ್ಲಿಯವರೆಗೂ ಮೈಸೂರು ನಗರವು ಉತ್ತಮ ಶ್ರೇಯಾಂಕಗಳನ್ನು ಗಳಿಸುತ್ತಾ ಬಂದಿದೆ. ಪ್ರಸಕ್ತ ಸಾಲಿನ ಸ್ವಚ್ಛ ಸರ್ವೇಕ್ಷಣ್ 2024 ರಲ್ಲಿಯೂ ಕೂಡ ಮೈಸೂರು ನಗರ ಭಾಗವಹಿಸುತ್ತಿದೆ. ಹೀಗಾಗಿ ಫೆಬ್ರವರಿ.15 ರಂದು ದೇಶದ್ಯಾದಂತ ಸರ್ವೇ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇನ್ನೂ ಈ ಸರ್ವೇ ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆಯೂ ಉತ್ತಮ ಶ್ರೇಯಾಂಕಗಳಿಸುವ ಸಲುವಾಗಿ ಇಂದು(ಫೆಬ್ರವರಿ.12) ಶ್ರೀ ಜಯಚಾಮರಾಜ ಒಡೆಯರ್‌ ಸಭಾಂಗಣದಲ್ಲಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಈ ಕೆಳಕಂಡ ಸಾಧಕರುಗಳನ್ನು ಸ್ವಚ್ಛತಾ ರಾಯಭಾರಿಗಳನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.

1. ಕ್ರೀಡಾ ಕ್ಷೇತ್ರ- ಕ್ರಿಕೆಟ್‌ ಆಟಗಾರ ಜಾವಗಲ್‌ ಶ್ರೀನಾಥ್‌

2. ಕ್ರೀಡಾ ಕ್ಷೇತ್ರ- ಮಹಿಳಾ ಕ್ರಿಕೆಟ್‌ ಆಟಗಾರ್ತಿ ವೇದಾಕೃಷ್ಣ ಮೂರ್ತಿ

3. ಸಂಗೀತ ಕ್ಷೇತ್ರ- ಗಾಯಕಿ ಅನನ್ಯ ಭಟ್‌

4. ಸಾಮಾಜಿಕ ಮಾಧ್ಯಮ- ಸೋಷಿಯಲ್‌ ಮೀಡಿಯಾ ಇನ್ಫೂಯೇನ್ಸರ್‌ ಧರ್ಮೇಂದ್ರ

5. ಚಲನಚಿತ್ರ ಕ್ಷೇತ್ರ- ನಟಿ ಅಮೃತಾ ಅಯ್ಯಂಗಾರ್‌

6. ಪರ್ವತಾ ರೋಹಿ- ಡಾ.ಉಷಾ ಹೆಗಡೆ

7. ಕ್ರೀಡಾ ಕ್ಷೇತ್ರ- ಖೋ-ಖೋ ಆಟಗಾರ್ತಿ ಬಿ.ಚೈತ್ರ

ಮೈಸೂರು ನಗರದ ಸ್ವಚ್ಛತೆಗೆ ಹಾಗೂ ನೈರ್ಮಲ್ಯವನ್ನು ಕಾಪಾಡುವ ಸಲುವಾಗಿ ಸ್ವಯಂಪ್ರೇರಿತರಾಗಿ ಸ್ವಚ್ಛತಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪಾಲಿಕೆಯೊಂದಿಗೆ ಕೈ ಜೋಡಿಸುತ್ತಿರುವ ಈ ಕೆಳಕಂಡ ವ್ಯಕ್ತಿಗಳನ್ನು ಸ್ವಚ್ಛತಾ ಚಾಂಪಿಯನ್‌ಗಳೆಂದು ಗುರುತಿಸಿ ಗೌರವಿಸಲಾಯಿತು.

1.ಡಾ.ಪಿ.ಎಸ್‌.ಮಧುಸೂದನ್‌

2. ಲೀಲಾ ವೆಂಕಟೇಶ್‌

3. ಡಾ.ಅಜಯ್‌ ಕುಮಾರ್‌ ಜೈನ್‌

4. ಡಾ.ಸ್ವಪ್ನ

5. ಎನ್‌. ರಾಘವನ್‌

6. ಸೈಯದ್‌ ಅಬ್ದುಲ್‌ ಅಜೀಜ್‌

7. ಅಮೂಲ್ಯ

ಅರ್ಚನ ಎಸ್‌ ಎಸ್

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

6 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

6 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

7 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

7 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

7 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

7 hours ago