ಮೈಸೂರು

ಸ್ವಚ್ಛ ಸರ್ವೇಕ್ಷಣ್‌ ಅಭಿಯಾನ ರಾಯಭಾರಿಗಳಾಗಿ ವಿವಿಧ ಕ್ಷೇತ್ರಗಳ ಸಾಧಕರ ನೇಮಕ: ಮೈ.ಮ.ಪಾಲಿಕೆ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪ್ರಸಕ್ತ ಸಾಲಿನ ಸ್ವಚ್ಛ ಸರ್ವೇಕ್ಷಣ್‌ ಅಭಿಯಾನ-2024ರಲ್ಲಿ ಮೈಸೂರು ಉತ್ತಮ ಶ್ರೇಯಾಂಕ ಪಡೆಯುವ ಉದ್ದೇಶದಿಂದ ವಿವಿಧ ಕ್ಷೇತ್ರಗಳ ಸಾಧಕರನ್ನು ರಾಯಭಾರಿಗಳಾಗಿ ನೇಮಿಸಲಾಗಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು 2014 ರಿಂದ ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆ ನಡೆಸುತ್ತಿದೆ. ಇಲ್ಲಿಯವರೆಗೂ ಮೈಸೂರು ನಗರವು ಉತ್ತಮ ಶ್ರೇಯಾಂಕಗಳನ್ನು ಗಳಿಸುತ್ತಾ ಬಂದಿದೆ. ಪ್ರಸಕ್ತ ಸಾಲಿನ ಸ್ವಚ್ಛ ಸರ್ವೇಕ್ಷಣ್ 2024 ರಲ್ಲಿಯೂ ಕೂಡ ಮೈಸೂರು ನಗರ ಭಾಗವಹಿಸುತ್ತಿದೆ. ಹೀಗಾಗಿ ಫೆಬ್ರವರಿ.15 ರಂದು ದೇಶದ್ಯಾದಂತ ಸರ್ವೇ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇನ್ನೂ ಈ ಸರ್ವೇ ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆಯೂ ಉತ್ತಮ ಶ್ರೇಯಾಂಕಗಳಿಸುವ ಸಲುವಾಗಿ ಇಂದು(ಫೆಬ್ರವರಿ.12) ಶ್ರೀ ಜಯಚಾಮರಾಜ ಒಡೆಯರ್‌ ಸಭಾಂಗಣದಲ್ಲಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಈ ಕೆಳಕಂಡ ಸಾಧಕರುಗಳನ್ನು ಸ್ವಚ್ಛತಾ ರಾಯಭಾರಿಗಳನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.

1. ಕ್ರೀಡಾ ಕ್ಷೇತ್ರ- ಕ್ರಿಕೆಟ್‌ ಆಟಗಾರ ಜಾವಗಲ್‌ ಶ್ರೀನಾಥ್‌

2. ಕ್ರೀಡಾ ಕ್ಷೇತ್ರ- ಮಹಿಳಾ ಕ್ರಿಕೆಟ್‌ ಆಟಗಾರ್ತಿ ವೇದಾಕೃಷ್ಣ ಮೂರ್ತಿ

3. ಸಂಗೀತ ಕ್ಷೇತ್ರ- ಗಾಯಕಿ ಅನನ್ಯ ಭಟ್‌

4. ಸಾಮಾಜಿಕ ಮಾಧ್ಯಮ- ಸೋಷಿಯಲ್‌ ಮೀಡಿಯಾ ಇನ್ಫೂಯೇನ್ಸರ್‌ ಧರ್ಮೇಂದ್ರ

5. ಚಲನಚಿತ್ರ ಕ್ಷೇತ್ರ- ನಟಿ ಅಮೃತಾ ಅಯ್ಯಂಗಾರ್‌

6. ಪರ್ವತಾ ರೋಹಿ- ಡಾ.ಉಷಾ ಹೆಗಡೆ

7. ಕ್ರೀಡಾ ಕ್ಷೇತ್ರ- ಖೋ-ಖೋ ಆಟಗಾರ್ತಿ ಬಿ.ಚೈತ್ರ

ಮೈಸೂರು ನಗರದ ಸ್ವಚ್ಛತೆಗೆ ಹಾಗೂ ನೈರ್ಮಲ್ಯವನ್ನು ಕಾಪಾಡುವ ಸಲುವಾಗಿ ಸ್ವಯಂಪ್ರೇರಿತರಾಗಿ ಸ್ವಚ್ಛತಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪಾಲಿಕೆಯೊಂದಿಗೆ ಕೈ ಜೋಡಿಸುತ್ತಿರುವ ಈ ಕೆಳಕಂಡ ವ್ಯಕ್ತಿಗಳನ್ನು ಸ್ವಚ್ಛತಾ ಚಾಂಪಿಯನ್‌ಗಳೆಂದು ಗುರುತಿಸಿ ಗೌರವಿಸಲಾಯಿತು.

1.ಡಾ.ಪಿ.ಎಸ್‌.ಮಧುಸೂದನ್‌

2. ಲೀಲಾ ವೆಂಕಟೇಶ್‌

3. ಡಾ.ಅಜಯ್‌ ಕುಮಾರ್‌ ಜೈನ್‌

4. ಡಾ.ಸ್ವಪ್ನ

5. ಎನ್‌. ರಾಘವನ್‌

6. ಸೈಯದ್‌ ಅಬ್ದುಲ್‌ ಅಜೀಜ್‌

7. ಅಮೂಲ್ಯ

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

40 mins ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

42 mins ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

43 mins ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

4 hours ago