ಮೈಸೂರು

ಕಲ್ಯಾಣಿ ಉಳಿವಿಗಾಗಿ ಪ್ರತಿಭಟನೆ ವೇಳೆ ಮಾತಿನ ಚಕಮಕಿ: ಎರಡು ಗುಂಪುಗಳ ನಡುವೆ ಗಲಾಟೆ

ಮೈಸೂರು: ನೂರು ವರ್ಷದ ಇತಿಹಾಸವಿರುವ ಮಂಟಪ ಹಾಗೂ ಕಲ್ಯಾಣಿ ಉಳಿವಿಗಾಗಿ ಆಗ್ರಹಿಸಿ ಪ್ರತಿಭಟನೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಮೈಸೂರಿನ ರಾಜೇಂದ್ರನಗರದ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಸಿಂಗರಿಶೆಟ್ಟಿ ಕಲ್ಯಾಣಿ ಪುನರುಜ್ಜೀವನಕ್ಕೆ ಒತ್ತಾಯಿಸಿ ಗುಂಪೊಂದು ಪ್ರತಿಭಟನೆ ನಡೆಸಿ, ದೇವಸ್ಥಾನ ಹಾಗೂ ಕಲ್ಯಾಣಿ ಸ್ವಚ್ಚತಾ ಕಾರ್ಯ ಮಾಡಬೇಕು. ಈ ಸಂಬಂಧ ಪಾಲಿಕೆ ಹಾಗೂ ಎಂಡಿಎ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸದರಿ ಸ್ಥಳದಲ್ಲಿ ಅನಧಿಕೃತವಾಗಿ ಶೆಡ್‌ಗಳ ಮಾದರಿಯಲ್ಲಿ ಅಂಗಡಿಗಳು ನಿರ್ಮಾಣ ಆಗಿದೆ. ಹೊಸ ಶೆಡ್ ಮಾದರಿ ಅಂಗಡಿಗಳು ಸಹ ನಿರ್ಮಾಣ ಆಗುತ್ತಿದೆ.

ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿತು. ಇದಕ್ಕೆ ಮತ್ತೊಂದು ಗುಂಪು ತೀವ್ರ ವಿರೋಧ ವ್ಯಕ್ತಪಡಿಸಿತು. ಪರಿಣಾಮ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದುಕೊಂಡು ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿತು. ಈ ವೇಳೆ ಸ್ಥಳಕ್ಕಾಗಮಿಸಿ ಎನ್‌.ಆರ್.ಠಾಣೆ ಇನ್ಸ್‌ಪೆಕ್ಟರ್‌ ಲಕ್ಷ್ಮೀಕಾಂತ್‌ ತಳವಾರ್‌ ಅವರು ಎರಡು ಗುಂಪುಗಳನ್ನು ಚದುರಿಸಿ ಗಲಾಟೆಯನ್ನು ತಿಳಿಗೊಳಿಸಿದರು.

ಆಂದೋಲನ ಡೆಸ್ಕ್

Recent Posts

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

25 mins ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

38 mins ago

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

2 hours ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

2 hours ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

2 hours ago

ಓದುಗರ ಪತ್ರ: ಕೋಚಿಂಗ್ ದಂಧೆಗೆ ಕಡಿವಾಣ ಹಾಕಿ

ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…

2 hours ago