ಮೈಸೂರು : ಸಿಎಂ ಸಿದ್ದರಾಮಯ್ಯ ತವರಲ್ಲಿ ಮತ್ತೆ ಮೈಕ್ರೋ ಫೈನಾನ್ಸ್ ಹಾವಳಿ ಮರುಕಳಿಸಿದ್ದು, ಸಾಲ ಮರು ಪಾವತಿಸದ ರೈತನ ಮನೆಯನ್ನ ಜಪ್ತಿ ಮಾಡಿರುವ ಘಟನೆ ನಡೆದಿದೆ.
ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಲದ ಕಂತು ಕಟ್ಟಿಲ್ಲ ಎಂದು ರೈತ ಚಿನ್ನಸ್ವಾಮಿ ಅವರ ಮನೆಯನ್ನ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಜಪ್ತಿ ಮಾಡಿದ್ದಾರೆ.
ಇದನ್ನು ಓದಿ: ಮೈಕ್ರೋ ಫೈನಾನ್ಸ್ ಸಿಬ್ಬಂದಿ ಅಡ್ಡಗಟ್ಟಿ ದರೋಡೆ : 25 ಸಾವಿರು ದೋಚಿ ಪರಾರಿ
ಕಾಲವಕಾಶ ಕೋರಿದ್ದರೂ ಸ್ಪಂದಿಸದ ಫೈನಾನ್ಸ್ ನ್ಯಾಯಾಲಯದ ಆದೇಶ ತಂದು ಮನೆಯನ್ನ ಜಪ್ತಿ ಮಾಡಿದ್ದಾರೆ. ಚಿನ್ನಸ್ವಾಮಿ ಕುಟುಂಬ ಮನೆ ನಿರ್ಮಾಣಕ್ಕೆ ಇಕ್ವೀಟಾಸ್ ಸ್ಮಾಲ್ ಫೈನಾನ್ಸ್ ನಲ್ಲಿ 2.70 ಲಕ್ಷ ಸಾಲ ಪಡೆದಿತ್ತು. ಈಗಾಗಲೆ 19 ಕಂತುಗಳ 1,89,000 ಸಾಲ ಮರು ಪಾವತಿಸಿದ್ದು, ಚಿನ್ನಸ್ವಾಮಿ ಪತ್ನಿ ಸಹ ಇಕ್ವೀಟಾಸ್ ಫೈನಾನ್ಸ್ ನಲ್ಲಿ ಗುಂಪು ಸಾಲ ಪಡೆದಿದ್ದರು.
ಆದರೆ ಮನೆ ಸಾಲವನ್ನ ಗುಂಪು ಸಾಲಕ್ಕೆ ವಜಾ ಮಾಡಿಕೊಂಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದು ಈ ಕುರಿತು ಸಾಲ ಮರುಪಾವತಿಗೆ ಕಾಲಾವಕಾಶಕ್ಕಾಗಿ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಕಾಲಾವಕಾಶ ಕೋರಿದರೂ ಮನೆ ಜಪ್ತಿ ಮಾಡಿದ್ದಾರೆಂದು ಚಿನ್ನಸ್ವಾಮಿ ಕುಟುಂಬ ಅಳಲು ತೋಡಿಕೊಂಡಿದ್ದಾರೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…