ಮೈಸೂರು : ಸಿಎಂ ಸಿದ್ದರಾಮಯ್ಯ ತವರಲ್ಲಿ ಮತ್ತೆ ಮೈಕ್ರೋ ಫೈನಾನ್ಸ್ ಹಾವಳಿ ಮರುಕಳಿಸಿದ್ದು, ಸಾಲ ಮರು ಪಾವತಿಸದ ರೈತನ ಮನೆಯನ್ನ ಜಪ್ತಿ ಮಾಡಿರುವ ಘಟನೆ ನಡೆದಿದೆ.
ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಲದ ಕಂತು ಕಟ್ಟಿಲ್ಲ ಎಂದು ರೈತ ಚಿನ್ನಸ್ವಾಮಿ ಅವರ ಮನೆಯನ್ನ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಜಪ್ತಿ ಮಾಡಿದ್ದಾರೆ.
ಇದನ್ನು ಓದಿ: ಮೈಕ್ರೋ ಫೈನಾನ್ಸ್ ಸಿಬ್ಬಂದಿ ಅಡ್ಡಗಟ್ಟಿ ದರೋಡೆ : 25 ಸಾವಿರು ದೋಚಿ ಪರಾರಿ
ಕಾಲವಕಾಶ ಕೋರಿದ್ದರೂ ಸ್ಪಂದಿಸದ ಫೈನಾನ್ಸ್ ನ್ಯಾಯಾಲಯದ ಆದೇಶ ತಂದು ಮನೆಯನ್ನ ಜಪ್ತಿ ಮಾಡಿದ್ದಾರೆ. ಚಿನ್ನಸ್ವಾಮಿ ಕುಟುಂಬ ಮನೆ ನಿರ್ಮಾಣಕ್ಕೆ ಇಕ್ವೀಟಾಸ್ ಸ್ಮಾಲ್ ಫೈನಾನ್ಸ್ ನಲ್ಲಿ 2.70 ಲಕ್ಷ ಸಾಲ ಪಡೆದಿತ್ತು. ಈಗಾಗಲೆ 19 ಕಂತುಗಳ 1,89,000 ಸಾಲ ಮರು ಪಾವತಿಸಿದ್ದು, ಚಿನ್ನಸ್ವಾಮಿ ಪತ್ನಿ ಸಹ ಇಕ್ವೀಟಾಸ್ ಫೈನಾನ್ಸ್ ನಲ್ಲಿ ಗುಂಪು ಸಾಲ ಪಡೆದಿದ್ದರು.
ಆದರೆ ಮನೆ ಸಾಲವನ್ನ ಗುಂಪು ಸಾಲಕ್ಕೆ ವಜಾ ಮಾಡಿಕೊಂಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದು ಈ ಕುರಿತು ಸಾಲ ಮರುಪಾವತಿಗೆ ಕಾಲಾವಕಾಶಕ್ಕಾಗಿ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಕಾಲಾವಕಾಶ ಕೋರಿದರೂ ಮನೆ ಜಪ್ತಿ ಮಾಡಿದ್ದಾರೆಂದು ಚಿನ್ನಸ್ವಾಮಿ ಕುಟುಂಬ ಅಳಲು ತೋಡಿಕೊಂಡಿದ್ದಾರೆ.
ಹೇಮಂತ್ಕುಮಾರ್ ರೈತ ಸಂಘ-ಕೆಆರ್ಎಸ್ ಪಕ್ಷ, ಎಸ್ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…
ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…
ಹೆಚ್.ಎಸ್. ದಿನೇಶ್ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…
ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…
ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…
ನವದೆಹಲಿ : ಹ್ಯಾಜಲ್ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…