ಮೈಸೂರು

ಮೈಸೂರು | ಸಿಎಂ ತವರಲ್ಲಿ ನಿಲ್ಲದ ಫೈನಾನ್ಸ್‌ ಹಾವಳಿ ; ರೈತನ ಮನೆ ಜಪ್ತಿ

ಮೈಸೂರು : ಸಿಎಂ ಸಿದ್ದರಾಮಯ್ಯ ತವರಲ್ಲಿ ಮತ್ತೆ ಮೈಕ್ರೋ ಫೈನಾನ್ಸ್ ಹಾವಳಿ ಮರುಕಳಿಸಿದ್ದು, ಸಾಲ ಮರು ಪಾವತಿಸದ ರೈತನ ಮನೆಯನ್ನ ಜಪ್ತಿ ಮಾಡಿರುವ ಘಟನೆ ನಡೆದಿದೆ.

ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಂದೇಗಾಲ‌ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಲದ ಕಂತು ಕಟ್ಟಿಲ್ಲ ಎಂದು ರೈತ ಚಿನ್ನಸ್ವಾಮಿ ಅವರ ಮನೆಯನ್ನ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಜಪ್ತಿ ಮಾಡಿದ್ದಾರೆ.

ಇದನ್ನು ಓದಿ: ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಅಡ್ಡಗಟ್ಟಿ ದರೋಡೆ : 25 ಸಾವಿರು ದೋಚಿ ಪರಾರಿ

ಕಾಲವಕಾಶ ಕೋರಿದ್ದರೂ ಸ್ಪಂದಿಸದ ಫೈನಾನ್ಸ್ ನ್ಯಾಯಾಲಯದ ಆದೇಶ ತಂದು ಮನೆಯನ್ನ ಜಪ್ತಿ ಮಾಡಿದ್ದಾರೆ. ಚಿನ್ನಸ್ವಾಮಿ ಕುಟುಂಬ ಮನೆ ನಿರ್ಮಾಣಕ್ಕೆ ಇಕ್ವೀಟಾಸ್ ಸ್ಮಾಲ್ ಫೈನಾನ್ಸ್ ನಲ್ಲಿ 2.70 ಲಕ್ಷ ಸಾಲ ಪಡೆದಿತ್ತು. ಈಗಾಗಲೆ 19 ಕಂತುಗಳ 1,89,000 ಸಾಲ‌ ಮರು ಪಾವತಿಸಿದ್ದು, ಚಿನ್ನಸ್ವಾಮಿ ಪತ್ನಿ ಸಹ ಇಕ್ವೀಟಾಸ್ ಫೈನಾನ್ಸ್ ನಲ್ಲಿ ಗುಂಪು ಸಾಲ ಪಡೆದಿದ್ದರು.

ಆದರೆ ಮನೆ ಸಾಲವನ್ನ ಗುಂಪು ಸಾಲಕ್ಕೆ ವಜಾ ಮಾಡಿಕೊಂಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದು ಈ ಕುರಿತು ಸಾಲ ಮರುಪಾವತಿಗೆ ಕಾಲಾವಕಾಶಕ್ಕಾಗಿ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಕಾಲಾವಕಾಶ ಕೋರಿದರೂ ಮನೆ ಜಪ್ತಿ ಮಾಡಿದ್ದಾರೆಂದು ಚಿನ್ನಸ್ವಾಮಿ ಕುಟುಂಬ ಅಳಲು ತೋಡಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

12 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

12 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

12 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago