ಮೈಸೂರು: ದೋಸ್ತಿ ಪಕ್ಷಗಳ ಪಾದಯಾತ್ರೆಗೆ ಪ್ರತಿಯಾಗಿ ಆಡಳಿತಾರೂಢ ಕಾಂಗ್ರೆಸ್ ಶುಕ್ರವಾರ ಇಲ್ಲಿ ಆಯೋಜಿಸಿರುವ ಜನಾಂದೋಲನ ಕಾರ್ಯಕ್ರಮದಲ್ಲಿ ಮೈತ್ರಿ ಪಕ್ಷಗಳ ಅವಧಿಯ ಹಗರಣಗಳನ್ನು ತೆರದಿಡಲು ಮುಂದಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ದಪಡಿಸಿದ್ದಾರೆ.
ಸಿಎಂ ವಿರುದ್ಧ ಗಂಭೀರ ಆಪಾದನೆ ಹೊರಿಸಿ ಹೋರಾಟದ ಹಾದಿ ಹಿಡಿದಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ತಯಾರಿ ನಡೆಸಿದ್ದಾರೆ. ಅವರೇ ಹೇಳಿದಂತೆ ಪ್ರತಿಪಕ್ಷಗಳ ವಿರುದ್ಧದ ಹಗರಣಗಳ ಆರೋಪದ ಬಗ್ಗೆ ವಿವರವಾಗಿ ಮಾತನಾಡುವ ನಿರೀಕ್ಷೆಯಿದೆ.
ಕಾಂಗ್ರೆಸ್ನ ಈ ಬೃಹತ್ ಜನಾಂದೋಲನ ಕಾರ್ಯಕ್ರಮದಕ್ಕೆ ರಾಜ್ಯದ ಹಲವೆಡೆಯಿಂದ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ನಗರದಲ್ಲೇ ತಂಗಿರುವ ಸಿಎಂ ಸಮಾವೇಶ ಯಶಸ್ಸಿಗೆ ಕಾರ್ಯತಂತ್ರ ರೂಪಿಸಿದ್ದಾರೆ.
ರಸ್ತೆಯುದ್ದಕ್ಕೂ ಕಾಂಗ್ರೆಸ್ ನಾಯಕರ ಬ್ಯಾನರ್, ಕಟೌಟ್ ಗಳು ರಾರಾಜಿಸುತ್ತಿವೆ. ಸಮಾವೇಶದ ಸುತ್ತಲು ಪೊಲೀಸ್ ಬಂದೊಬಸ್ತ್ ಏರ್ಪಡು ಮಾಡಲಾಗಿದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…