ಮೈಸೂರು: ಜಿಲ್ಲೆಯ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ 3 ದಿನಗಳ 13ನೇ ಕುಂಭಮೇಳ ನಡೆಯಲಿದೆ.
ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಅಪಾರ ಭಕ್ತರು ಸೇರುವ ನಿರೀಕ್ಷೆ ಇದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಕರ್ನಾಟಕದ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆ.12ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ.
ಅಂದು ಬೆಳಗ್ಗೆ 9ರಿಂದ 9.30ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12ರಿಂದ 1 ಗಂಟೆವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ.
ಭರದ ಸಿದ್ಧತೆ
ಕುಂಭಮೇಳದ ಧಾರ್ಮಿಕ ಕಾರ್ಯಕ್ರಮಕ್ಕಾಗಿ ವೇದಿಕೆ ನಿರ್ಮಾಣ, ಸ್ವಚ್ಛತಾ, ಲೈಟಿಂಗ್ಸ್ ಅಳವಡಿಕೆ ಕಾರ್ಯ ಮಾಡಲಾಗಿದೆ. ಅಹಿತಕರ ಘಟನೆಗಳು ಜರುಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ನದಿ ಪಾತ್ರದ ಹಲವೆಡೆ ಮುಳುಗುತಜ್ಞರನ್ನು ನಿಯೋಜನೆ ಮಾಡಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಸರ್ಕಾರ ಇದಕ್ಕಾಗಿ 6 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ.
ಧಾರ್ಮಿಕ ಕಾರ್ಯಕ್ರಮಗಳು
ಫೆ.10ರಂದು ತ್ರಯೋದಶಿ, ಪುಷ್ಯ ಪ್ರಾತಃಕಾಲ 9 ಗಂಟೆಗೆ ಶ್ರೀ ಅಗಸ್ತೇಶ್ವರ ಸನ್ನಿಧಿಯಲ್ಲಿ, ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುತ್ತದೆ. ಸಂಜೆ 5 ಗಂಟೆಗೆ ಧರ್ಮಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಅಥಿತಿ ಗಣ್ಯರಿಂದ ಉದ್ಘಾಟನೆ ಮತ್ತು ಧ್ವಜಾರೋಹಣ ನೆರವೇರಲಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…