ಮೈಸೂರು: ಹಾಲು, ಮೊಸರು, ವಿದ್ಯುತ್, ಮೆಟ್ರೊ ಪ್ರಯಾಣ, ಸಾರ್ವಜನಿಕ ಸಾರಿಗೆ, ಡೀಸೆಲ್, ಪೆಟ್ರೋಲ್ ದರ ಏರಿಕೆ ಮಾಡಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆ ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ರಾಮಸ್ವಾಮಿ ವೃತ್ತದ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ಅಗತ್ಯ ವಸ್ತುಗಳು ಸೇರಿದಂತ ಮೊದಲಾದವುಗಳ ಬೆಲೆ ಏರಿಕೆ ಮಾಡಿರುವುದರಿಂದ ಜನತೆ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಪೈಪೋಟಿಗೆ ಬಿದ್ದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಜನಸಾಮಾನ್ಯರ ಬಗ್ಗೆ ಕಾಳಜಿಯಿದ್ದರೆ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಸಿಪಿಐ(ಎಂ) ಮೈಸೂರು ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ಮುಜೀಬ್, ಸದಸ್ಯರಾದ ಎಚ್.ಎಸ್.ಸುನಂದ, ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇ ಗೌಡ, ಕೆ.ಬಸವರಾಜ್, ಜಿ.ಜಯರಾಂ, ಸುಬ್ರಹ್ಮಣ್ಯ, ಪೃಥ್ವಿ, ಕುಮಾರಿ, ಶಕುಂತಲಾ, ಲೀಲಾವತಿ, ಮಂಜುಳಾ, ಅಣ್ಣಪ್ಪ, ಮೆಹಬೂಬ್, ಬಾಲಾಜಿ ರಾವ್, ಕೃಷ್ಣ, ಚಂದ್ರಶೇಖರ್, ರಾಜೇಂದ್ರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…