ಮೈಸೂರು: ಹಾಲು, ಮೊಸರು, ವಿದ್ಯುತ್, ಮೆಟ್ರೊ ಪ್ರಯಾಣ, ಸಾರ್ವಜನಿಕ ಸಾರಿಗೆ, ಡೀಸೆಲ್, ಪೆಟ್ರೋಲ್ ದರ ಏರಿಕೆ ಮಾಡಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆ ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ರಾಮಸ್ವಾಮಿ ವೃತ್ತದ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ಅಗತ್ಯ ವಸ್ತುಗಳು ಸೇರಿದಂತ ಮೊದಲಾದವುಗಳ ಬೆಲೆ ಏರಿಕೆ ಮಾಡಿರುವುದರಿಂದ ಜನತೆ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಪೈಪೋಟಿಗೆ ಬಿದ್ದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಜನಸಾಮಾನ್ಯರ ಬಗ್ಗೆ ಕಾಳಜಿಯಿದ್ದರೆ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಸಿಪಿಐ(ಎಂ) ಮೈಸೂರು ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ಮುಜೀಬ್, ಸದಸ್ಯರಾದ ಎಚ್.ಎಸ್.ಸುನಂದ, ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇ ಗೌಡ, ಕೆ.ಬಸವರಾಜ್, ಜಿ.ಜಯರಾಂ, ಸುಬ್ರಹ್ಮಣ್ಯ, ಪೃಥ್ವಿ, ಕುಮಾರಿ, ಶಕುಂತಲಾ, ಲೀಲಾವತಿ, ಮಂಜುಳಾ, ಅಣ್ಣಪ್ಪ, ಮೆಹಬೂಬ್, ಬಾಲಾಜಿ ರಾವ್, ಕೃಷ್ಣ, ಚಂದ್ರಶೇಖರ್, ರಾಜೇಂದ್ರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…