Mysuru Dasara 2025 | Formation of Dasara Sub-Committees, Responsibilities Assigned to Officials
ಮೈಸೂರು : ದಸರಾ ಮಹೋತ್ಸವದ ಪ್ರಮುಖ ಕೇಂದ್ರ ಬಿಂದುವಾಗಿರುವ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಮೊದಲ ತಂಡದ 9 ಆನೆಗಳನ್ನು ಮೈಸೂರಿಗೆ ಕರೆತರುವ ಗಜಪಯಣಕ್ಕೆ ವೀರನ ಹೊಸಹಳ್ಳಿಯಲ್ಲಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.
ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆನೆಗಳ ಆರೋಗ್ಯ ತಪಾಸಣೆ ನಡೆಸಿ, ಆನೆ ಆಯ್ಕೆ ಸಮಿತಿಯ ಮೇಲಧಿಕಾರಿಗಳೊಂದಿಗೆ ಚರ್ಚಿಸಿ 14 ಆನೆಗಳನ್ನು ಮೈಸೂರಿಗೆ ಕರೆತರಲು ತೀರ್ಮಾನಿಸಲಾಗಿದೆ. ಈಗಾಗಲೇ ಅನುಮತಿಗಾಗಿ ಇಲಾಖೆಯ ಮುಖ್ಯಸ್ಥರಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿರುತ್ತದೆ. ಆ. 4ರಂದು ವೀರನಹೊಸಹಳ್ಳಿ ಗ್ರಾಮದ ಬಳಿ ಗಜಪಯಣ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.
ನಂತರ ಆನೆಗಳನ್ನು ಮೈಸೂರಿಗೆ ಲಾರಿ ಮೂಲಕ ಕರೆತರಲಾಗುವುದು. ಮೈಸೂರಿಗೆ ಕರೆತರಲಾಗುವ ಆನೆಗಳೊಂದಿಗೆ ಬರುವ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರಿಗಾಗಿ ಅರಮನೆ ಆವರಣದ ತಾತ್ಕಾಲಿಕ ಶೆಡ್ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಕಾರ್ಯವು ಇನ್ನೆರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಡಿಸಿಎಫ್ ಡಾ. ಐ. ಬಿ. ಪ್ರಭುಗೌಡ ಅವರು ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಿದರು.
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…
ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…