ಮೈಸೂರು

ಮೈಸೂರು ದಸರಾ | ಗಜಪಯಣಕ್ಕೆ ಸಿದ್ಧತೆ

ಮೈಸೂರು : ದಸರಾ ಮಹೋತ್ಸವದ ಪ್ರಮುಖ ಕೇಂದ್ರ ಬಿಂದುವಾಗಿರುವ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಮೊದಲ ತಂಡದ 9 ಆನೆಗಳನ್ನು ಮೈಸೂರಿಗೆ ಕರೆತರುವ ಗಜಪಯಣಕ್ಕೆ ವೀರನ ಹೊಸಹಳ್ಳಿಯಲ್ಲಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆನೆಗಳ ಆರೋಗ್ಯ ತಪಾಸಣೆ ನಡೆಸಿ, ಆನೆ ಆಯ್ಕೆ ಸಮಿತಿಯ ಮೇಲಧಿಕಾರಿಗಳೊಂದಿಗೆ ಚರ್ಚಿಸಿ 14 ಆನೆಗಳನ್ನು ಮೈಸೂರಿಗೆ ಕರೆತರಲು ತೀರ್ಮಾನಿಸಲಾಗಿದೆ. ಈಗಾಗಲೇ ಅನುಮತಿಗಾಗಿ ಇಲಾಖೆಯ ಮುಖ್ಯಸ್ಥರಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿರುತ್ತದೆ. ಆ. 4ರಂದು ವೀರನಹೊಸಹಳ್ಳಿ ಗ್ರಾಮದ ಬಳಿ ಗಜಪಯಣ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

ನಂತರ ಆನೆಗಳನ್ನು ಮೈಸೂರಿಗೆ ಲಾರಿ ಮೂಲಕ ಕರೆತರಲಾಗುವುದು. ಮೈಸೂರಿಗೆ ಕರೆತರಲಾಗುವ ಆನೆಗಳೊಂದಿಗೆ ಬರುವ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರಿಗಾಗಿ ಅರಮನೆ ಆವರಣದ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಕಾರ್ಯವು ಇನ್ನೆರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಡಿಸಿಎಫ್ ಡಾ. ಐ. ಬಿ. ಪ್ರಭುಗೌಡ ಅವರು ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago