Mysuru Dasara 2025 | Formation of Dasara Sub-Committees, Responsibilities Assigned to Officials
ಮೈಸೂರು : ದಸರಾ ಮಹೋತ್ಸದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಡೆ, ಮಾವುತರು ಮತ್ತು ಕಾವಾಡಿ, ಅರಣ್ಯಾಧಿಕಾರಿಗಳಿಗೆ ಜಿಲ್ಲಾಡಳಿತದಿಂದ 2.04 ಕೋಟಿ ರೂ.ಗಳ ವಿಮೆ ಮಾಡಿಸಲಾಗಿದೆ.
ಈ ಬಾರಿ ದಸರೆಯಲ್ಲಿ ಪಾಲ್ಗೊಳ್ಳುವ 14 ಆನೆಗಳು, 14 ಜನ ಮಾವುತರು, 14 ಜನ ಕವಾಡಿಗಳು ಸೇರಿದಂತೆ ಅರಣ್ಯ ಇಲಾಖೆಯ 43 ಸಿಬ್ಬಂದಿಗಳು ವಿಮೆ ವ್ಯಾಪ್ತಿಗೆ ಒಳಪಡಲಿದ್ದಾರೆ. ಈ ಪೈಕಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಗೆ 50 ಲಕ್ಷ ರೂ. ವಿಮೆ ಸೌಲಭ್ಯವಿದೆ. ಗಜಪಡೆಯ ತಾಲೀಮು ಅಥವಾ ಮೆರವಣಿಗೆಯ ಸಂದರ್ಭ ಏನಾದರೂ ಅನಾಹುತದಿಂದ ಗಾಯಗೊಂಡರೆ, ಇಲ್ಲವೇ ಸಾರ್ವಜನಿಕರಿಗೆ ಹಾನಿ ಉಂಟು ಮಾಡಿದರೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಅನೇಕ ವರ್ಷಗಳಿಂದ ಈ ಕ್ರಮ ಕೈಗೊಳುತ್ತಿದೆ. ಅಂತೆಯೆ, ಈ ಬಾರಿಯೂ ಅದನ್ನು ಮುಂದುವರಿಸಿದೆ.
ವನ್ಯಜೀವಿಗಳ ವಿಷಯವಾಗಿ ದೇಶದಲ್ಲಿ ಕಠಿಣ ಕಾನೂನುಗಳಿವೆ. ಕಾಡಿನಿಂದ ನಾಡಿಗೆ ಪ್ರಾಣಿಗಳನ್ನು ಕರೆತರುವಾಗ ಸೂಕ್ತ ಕ್ರಮ ವಹಿಸಬೇಕು. ಅದರಲ್ಲೂ ಆನೆಗಳನ್ನು ಕರೆತರುವಾಗ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಆನೆಗಳಿಗೆ ಅಥವಾ ಸಾರ್ವಜನಿಕರಿಗೆ ಒಂದೊಮ್ಮೆ ಏನಾದರೂ ತೊಂದರೆಯಾದರೆ ಪರಿಹಾರ ನೀಡಲು ಅರಣ್ಯ ಇಲಾಖೆಯಲ್ಲಿ ಅವಕಾಶವಿಲ್ಲ. ಅದಕ್ಕಾಗಿ ಗಜಪಡೆ, ಗಜಸೇವಕರು, ಸಿಬ್ಬಂದಿ, ಸಾರ್ವಜನಿಕರು ಹಾಗೂ ಅವರ ಆಸ್ತಿಗೆ ವಿಮೆ ಮಾಡಿಸಲಾಗುತ್ತದೆ. ಈ ವಿಮೆಯ ಹಣವನ್ನು ಜಿಲ್ಲಾಡಳಿತವೇ ಪಾವತಿಸುತ್ತದೆ. ಈ ವಿಮೆ ಜಂಬೂಸವಾರಿ ಮೆರವಣಿಗೆ ಮುಗಿಸಿ ಮತ್ತೆ ಆನೆಗಳು ಕಾಡು ಸೇರುವವರೆಗೂ ಚಾಲ್ತಿಯಲ್ಲಿರಲ್ಲಿದೆ.
ದಸರಾ ಗಜಪಡೆ ಸೋಮವಾರ ಮೈಸೂರಿಗೆ ಆಗಮಿಸಿದ್ದು, ಸೋಮವಾರದಿಂದ ಆರಂಭವಾಗಿರುವ ಈ ಸೌಲಭ್ಯಗಜಪಡೆ ಮೈಸೂರಿನಿಂದ ವಾಪಸ್ಸಾಗುವ ಅ.5 ರವರೆಗೂ ಚಾಲ್ತಿಯಲ್ಲಿರುವಂತೆ ವಿಮೆ ಮಾಡಿಸಲಾಗಿದೆ. ಅದಕ್ಕಾಗಿ ಜಿಲ್ಲಾಡಳಿತದ ವತಿಯಿಂದ ದಿ ನ್ಯೂ ಇಂಡಿಯಾ ಅಸ್ಯೂರೆನ್ಸ್ ಕಂಪೆನಿಗೆ 67 ಸಾವಿರ ರೂ. ಪ್ರೀಮಿಯಂ ಪಾವತಿಸಲಾಗಿದೆ.
ಗಜಪಡೆಯ ಪಾಲೆಷ್ಟು?
ಈ ವಿಮೆಯಲ್ಲಿ ಗಜಪಡೆಯ ಪಾಲು 68 ಲಕ್ಷ ರೂ. ಇದೆ. ಅಂಬಾರಿ ಹೊರುವ ಅಭಿಮನ್ಯು ಸೇರಿದಂತೆ ಎಲ್ಲ ಗಂಡಾನೆಗಳಿಗೆ ತಲಾ 5 ಲಕ್ಷ ರೂ. ಸೇರಿದಂತೆ ಒಟ್ಟು 50 ಲಕ್ಷ ರೂ. ವಿಮೆ ಮಾಡಿಸಲಾಗಿದೆ. ನಾಲ್ಕು ಹೆಣ್ಣಾನೆಗಳಿಗೆ 18 ಲಕ್ಷ ರೂ. ವಿಮೆ ಮಾಡಿಸಲಾಗಿದೆ.
ಮಾವುತರು, ಕಾವಾಡಿಗಳು, ವಿಶೇಷ ಮಾವುತರು, ಸಹಾಯಕರು, ಅಧೀಕಾರಿಗಳು ಸೇರಿದಂತೆ ಒಟ್ಟು 43 ಜನರಿಗೆ 86 ಲಕ್ಷ ರೂ. ವಿಮೆ ಮಾಡಿಸಲಾಗಿದೆ. ದಸರಾ ಆನೆಗಳಿಂದ ಸಾರ್ವಜನಿಕರಿಗೆ ತೊಂದರೆಯಾದಲ್ಲಿ, ಸಾರ್ವಜನಿಕರ ಆಸ್ತಿ-ಪಾಸ್ತಿಗಳಿಗೆ ದಸರಾ ಆನೆಗಳಿಂದ ನಷ್ಟವಾದರೂ ವಿಮೆ ಸೌಲಭ್ಯ ದೊರೆಯಲಿದೆ. ಇದಕ್ಕೆ 50 ಲಕ್ಷ ರೂ. ವಿಮೆ ಮಾಡಿಸಲಾಗಿದೆ. ಗಜ ಸೇವಕರಿಗೆ ತಲಾ 2 ಲಕ್ಷ ರೂ. ವಿಮೆ ಜೊತೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಪಶು ವೈದ್ಯಾಧಿಕಾರಿ, ಸಹಾಯಕರುಗಳಿಗೂ ತಲಾ 2 ಲಕ್ಷ ರೂ. ವಿಮೆ ಸೌಲಭ್ಯ ನೀಡಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…
ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…
ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…
ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…