ಮೈಸೂರು

ಮೈಸೂರು ದಸರಾ | ಎಲ್ಲಾ ಗಜಪಡೆ, ಕಾವಾಡಿ, ಮಾವುತರಿಗೆ ವಿಮೆ

ಮೈಸೂರು : ದಸರಾ ಮಹೋತ್ಸದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಡೆ, ಮಾವುತರು ಮತ್ತು ಕಾವಾಡಿ, ಅರಣ್ಯಾಧಿಕಾರಿಗಳಿಗೆ ಜಿಲ್ಲಾಡಳಿತದಿಂದ 2.04 ಕೋಟಿ ರೂ.ಗಳ ವಿಮೆ ಮಾಡಿಸಲಾಗಿದೆ.

ಈ ಬಾರಿ ದಸರೆಯಲ್ಲಿ ಪಾಲ್ಗೊಳ್ಳುವ 14 ಆನೆಗಳು, 14 ಜನ ಮಾವುತರು, 14 ಜನ ಕವಾಡಿಗಳು ಸೇರಿದಂತೆ ಅರಣ್ಯ ಇಲಾಖೆಯ 43 ಸಿಬ್ಬಂದಿಗಳು ವಿಮೆ ವ್ಯಾಪ್ತಿಗೆ ಒಳಪಡಲಿದ್ದಾರೆ. ಈ ಪೈಕಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಗೆ 50 ಲಕ್ಷ ರೂ. ವಿಮೆ ಸೌಲಭ್ಯವಿದೆ. ಗಜಪಡೆಯ ತಾಲೀಮು ಅಥವಾ ಮೆರವಣಿಗೆಯ ಸಂದರ್ಭ ಏನಾದರೂ ಅನಾಹುತದಿಂದ ಗಾಯಗೊಂಡರೆ, ಇಲ್ಲವೇ ಸಾರ್ವಜನಿಕರಿಗೆ ಹಾನಿ ಉಂಟು ಮಾಡಿದರೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಅನೇಕ ವರ್ಷಗಳಿಂದ ಈ ಕ್ರಮ ಕೈಗೊಳುತ್ತಿದೆ. ಅಂತೆಯೆ, ಈ ಬಾರಿಯೂ ಅದನ್ನು ಮುಂದುವರಿಸಿದೆ.

ವನ್ಯಜೀವಿಗಳ ವಿಷಯವಾಗಿ ದೇಶದಲ್ಲಿ ಕಠಿಣ ಕಾನೂನುಗಳಿವೆ. ಕಾಡಿನಿಂದ ನಾಡಿಗೆ ಪ್ರಾಣಿಗಳನ್ನು ಕರೆತರುವಾಗ ಸೂಕ್ತ ಕ್ರಮ ವಹಿಸಬೇಕು. ಅದರಲ್ಲೂ ಆನೆಗಳನ್ನು ಕರೆತರುವಾಗ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಆನೆಗಳಿಗೆ ಅಥವಾ ಸಾರ್ವಜನಿಕರಿಗೆ ಒಂದೊಮ್ಮೆ ಏನಾದರೂ ತೊಂದರೆಯಾದರೆ ಪರಿಹಾರ ನೀಡಲು ಅರಣ್ಯ ಇಲಾಖೆಯಲ್ಲಿ ಅವಕಾಶವಿಲ್ಲ. ಅದಕ್ಕಾಗಿ ಗಜಪಡೆ, ಗಜಸೇವಕರು, ಸಿಬ್ಬಂದಿ, ಸಾರ್ವಜನಿಕರು ಹಾಗೂ ಅವರ ಆಸ್ತಿಗೆ ವಿಮೆ ಮಾಡಿಸಲಾಗುತ್ತದೆ. ಈ ವಿಮೆಯ ಹಣವನ್ನು ಜಿಲ್ಲಾಡಳಿತವೇ ಪಾವತಿಸುತ್ತದೆ. ಈ ವಿಮೆ ಜಂಬೂಸವಾರಿ ಮೆರವಣಿಗೆ ಮುಗಿಸಿ ಮತ್ತೆ ಆನೆಗಳು ಕಾಡು ಸೇರುವವರೆಗೂ ಚಾಲ್ತಿಯಲ್ಲಿರಲ್ಲಿದೆ.

ದಸರಾ ಗಜಪಡೆ ಸೋಮವಾರ ಮೈಸೂರಿಗೆ ಆಗಮಿಸಿದ್ದು, ಸೋಮವಾರದಿಂದ ಆರಂಭವಾಗಿರುವ ಈ ಸೌಲಭ್ಯಗಜಪಡೆ ಮೈಸೂರಿನಿಂದ ವಾಪಸ್ಸಾಗುವ ಅ.5 ರವರೆಗೂ ಚಾಲ್ತಿಯಲ್ಲಿರುವಂತೆ ವಿಮೆ ಮಾಡಿಸಲಾಗಿದೆ. ಅದಕ್ಕಾಗಿ ಜಿಲ್ಲಾಡಳಿತದ ವತಿಯಿಂದ ದಿ ನ್ಯೂ ಇಂಡಿಯಾ ಅಸ್ಯೂರೆನ್ಸ್ ಕಂಪೆನಿಗೆ 67 ಸಾವಿರ ರೂ. ಪ್ರೀಮಿಯಂ ಪಾವತಿಸಲಾಗಿದೆ.

ಗಜಪಡೆಯ ಪಾಲೆಷ್ಟು?
ಈ ವಿಮೆಯಲ್ಲಿ ಗಜಪಡೆಯ ಪಾಲು 68 ಲಕ್ಷ ರೂ. ಇದೆ. ಅಂಬಾರಿ ಹೊರುವ ಅಭಿಮನ್ಯು ಸೇರಿದಂತೆ ಎಲ್ಲ ಗಂಡಾನೆಗಳಿಗೆ ತಲಾ 5 ಲಕ್ಷ ರೂ. ಸೇರಿದಂತೆ ಒಟ್ಟು 50 ಲಕ್ಷ ರೂ. ವಿಮೆ ಮಾಡಿಸಲಾಗಿದೆ. ನಾಲ್ಕು ಹೆಣ್ಣಾನೆಗಳಿಗೆ 18 ಲಕ್ಷ ರೂ. ವಿಮೆ ಮಾಡಿಸಲಾಗಿದೆ.

ಮಾವುತರು, ಕಾವಾಡಿಗಳು, ವಿಶೇಷ ಮಾವುತರು, ಸಹಾಯಕರು, ಅಧೀಕಾರಿಗಳು ಸೇರಿದಂತೆ ಒಟ್ಟು 43 ಜನರಿಗೆ 86 ಲಕ್ಷ ರೂ. ವಿಮೆ ಮಾಡಿಸಲಾಗಿದೆ. ದಸರಾ ಆನೆಗಳಿಂದ ಸಾರ್ವಜನಿಕರಿಗೆ ತೊಂದರೆಯಾದಲ್ಲಿ, ಸಾರ್ವಜನಿಕರ ಆಸ್ತಿ-ಪಾಸ್ತಿಗಳಿಗೆ ದಸರಾ ಆನೆಗಳಿಂದ ನಷ್ಟವಾದರೂ ವಿಮೆ ಸೌಲಭ್ಯ ದೊರೆಯಲಿದೆ. ಇದಕ್ಕೆ 50 ಲಕ್ಷ ರೂ. ವಿಮೆ ಮಾಡಿಸಲಾಗಿದೆ. ಗಜ ಸೇವಕರಿಗೆ ತಲಾ 2 ಲಕ್ಷ ರೂ. ವಿಮೆ ಜೊತೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಪಶು ವೈದ್ಯಾಧಿಕಾರಿ, ಸಹಾಯಕರುಗಳಿಗೂ ತಲಾ 2 ಲಕ್ಷ ರೂ. ವಿಮೆ ಸೌಲಭ್ಯ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

3 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

4 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

4 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

7 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

8 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

8 hours ago