ಮೈಸೂರು

ಮೈಸೂರು ದಸರಾ | ಎಲ್ಲಾ ಗಜಪಡೆ, ಕಾವಾಡಿ, ಮಾವುತರಿಗೆ ವಿಮೆ

ಮೈಸೂರು : ದಸರಾ ಮಹೋತ್ಸದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಡೆ, ಮಾವುತರು ಮತ್ತು ಕಾವಾಡಿ, ಅರಣ್ಯಾಧಿಕಾರಿಗಳಿಗೆ ಜಿಲ್ಲಾಡಳಿತದಿಂದ 2.04 ಕೋಟಿ ರೂ.ಗಳ ವಿಮೆ ಮಾಡಿಸಲಾಗಿದೆ.

ಈ ಬಾರಿ ದಸರೆಯಲ್ಲಿ ಪಾಲ್ಗೊಳ್ಳುವ 14 ಆನೆಗಳು, 14 ಜನ ಮಾವುತರು, 14 ಜನ ಕವಾಡಿಗಳು ಸೇರಿದಂತೆ ಅರಣ್ಯ ಇಲಾಖೆಯ 43 ಸಿಬ್ಬಂದಿಗಳು ವಿಮೆ ವ್ಯಾಪ್ತಿಗೆ ಒಳಪಡಲಿದ್ದಾರೆ. ಈ ಪೈಕಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಗೆ 50 ಲಕ್ಷ ರೂ. ವಿಮೆ ಸೌಲಭ್ಯವಿದೆ. ಗಜಪಡೆಯ ತಾಲೀಮು ಅಥವಾ ಮೆರವಣಿಗೆಯ ಸಂದರ್ಭ ಏನಾದರೂ ಅನಾಹುತದಿಂದ ಗಾಯಗೊಂಡರೆ, ಇಲ್ಲವೇ ಸಾರ್ವಜನಿಕರಿಗೆ ಹಾನಿ ಉಂಟು ಮಾಡಿದರೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಅನೇಕ ವರ್ಷಗಳಿಂದ ಈ ಕ್ರಮ ಕೈಗೊಳುತ್ತಿದೆ. ಅಂತೆಯೆ, ಈ ಬಾರಿಯೂ ಅದನ್ನು ಮುಂದುವರಿಸಿದೆ.

ವನ್ಯಜೀವಿಗಳ ವಿಷಯವಾಗಿ ದೇಶದಲ್ಲಿ ಕಠಿಣ ಕಾನೂನುಗಳಿವೆ. ಕಾಡಿನಿಂದ ನಾಡಿಗೆ ಪ್ರಾಣಿಗಳನ್ನು ಕರೆತರುವಾಗ ಸೂಕ್ತ ಕ್ರಮ ವಹಿಸಬೇಕು. ಅದರಲ್ಲೂ ಆನೆಗಳನ್ನು ಕರೆತರುವಾಗ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಆನೆಗಳಿಗೆ ಅಥವಾ ಸಾರ್ವಜನಿಕರಿಗೆ ಒಂದೊಮ್ಮೆ ಏನಾದರೂ ತೊಂದರೆಯಾದರೆ ಪರಿಹಾರ ನೀಡಲು ಅರಣ್ಯ ಇಲಾಖೆಯಲ್ಲಿ ಅವಕಾಶವಿಲ್ಲ. ಅದಕ್ಕಾಗಿ ಗಜಪಡೆ, ಗಜಸೇವಕರು, ಸಿಬ್ಬಂದಿ, ಸಾರ್ವಜನಿಕರು ಹಾಗೂ ಅವರ ಆಸ್ತಿಗೆ ವಿಮೆ ಮಾಡಿಸಲಾಗುತ್ತದೆ. ಈ ವಿಮೆಯ ಹಣವನ್ನು ಜಿಲ್ಲಾಡಳಿತವೇ ಪಾವತಿಸುತ್ತದೆ. ಈ ವಿಮೆ ಜಂಬೂಸವಾರಿ ಮೆರವಣಿಗೆ ಮುಗಿಸಿ ಮತ್ತೆ ಆನೆಗಳು ಕಾಡು ಸೇರುವವರೆಗೂ ಚಾಲ್ತಿಯಲ್ಲಿರಲ್ಲಿದೆ.

ದಸರಾ ಗಜಪಡೆ ಸೋಮವಾರ ಮೈಸೂರಿಗೆ ಆಗಮಿಸಿದ್ದು, ಸೋಮವಾರದಿಂದ ಆರಂಭವಾಗಿರುವ ಈ ಸೌಲಭ್ಯಗಜಪಡೆ ಮೈಸೂರಿನಿಂದ ವಾಪಸ್ಸಾಗುವ ಅ.5 ರವರೆಗೂ ಚಾಲ್ತಿಯಲ್ಲಿರುವಂತೆ ವಿಮೆ ಮಾಡಿಸಲಾಗಿದೆ. ಅದಕ್ಕಾಗಿ ಜಿಲ್ಲಾಡಳಿತದ ವತಿಯಿಂದ ದಿ ನ್ಯೂ ಇಂಡಿಯಾ ಅಸ್ಯೂರೆನ್ಸ್ ಕಂಪೆನಿಗೆ 67 ಸಾವಿರ ರೂ. ಪ್ರೀಮಿಯಂ ಪಾವತಿಸಲಾಗಿದೆ.

ಗಜಪಡೆಯ ಪಾಲೆಷ್ಟು?
ಈ ವಿಮೆಯಲ್ಲಿ ಗಜಪಡೆಯ ಪಾಲು 68 ಲಕ್ಷ ರೂ. ಇದೆ. ಅಂಬಾರಿ ಹೊರುವ ಅಭಿಮನ್ಯು ಸೇರಿದಂತೆ ಎಲ್ಲ ಗಂಡಾನೆಗಳಿಗೆ ತಲಾ 5 ಲಕ್ಷ ರೂ. ಸೇರಿದಂತೆ ಒಟ್ಟು 50 ಲಕ್ಷ ರೂ. ವಿಮೆ ಮಾಡಿಸಲಾಗಿದೆ. ನಾಲ್ಕು ಹೆಣ್ಣಾನೆಗಳಿಗೆ 18 ಲಕ್ಷ ರೂ. ವಿಮೆ ಮಾಡಿಸಲಾಗಿದೆ.

ಮಾವುತರು, ಕಾವಾಡಿಗಳು, ವಿಶೇಷ ಮಾವುತರು, ಸಹಾಯಕರು, ಅಧೀಕಾರಿಗಳು ಸೇರಿದಂತೆ ಒಟ್ಟು 43 ಜನರಿಗೆ 86 ಲಕ್ಷ ರೂ. ವಿಮೆ ಮಾಡಿಸಲಾಗಿದೆ. ದಸರಾ ಆನೆಗಳಿಂದ ಸಾರ್ವಜನಿಕರಿಗೆ ತೊಂದರೆಯಾದಲ್ಲಿ, ಸಾರ್ವಜನಿಕರ ಆಸ್ತಿ-ಪಾಸ್ತಿಗಳಿಗೆ ದಸರಾ ಆನೆಗಳಿಂದ ನಷ್ಟವಾದರೂ ವಿಮೆ ಸೌಲಭ್ಯ ದೊರೆಯಲಿದೆ. ಇದಕ್ಕೆ 50 ಲಕ್ಷ ರೂ. ವಿಮೆ ಮಾಡಿಸಲಾಗಿದೆ. ಗಜ ಸೇವಕರಿಗೆ ತಲಾ 2 ಲಕ್ಷ ರೂ. ವಿಮೆ ಜೊತೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಪಶು ವೈದ್ಯಾಧಿಕಾರಿ, ಸಹಾಯಕರುಗಳಿಗೂ ತಲಾ 2 ಲಕ್ಷ ರೂ. ವಿಮೆ ಸೌಲಭ್ಯ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

16 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

3 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

17 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

18 hours ago