ಮೈಸೂರು

ಮೈಸೂರು ದಸರಾ | ದೀಪಾಲಂಕಾರಕ್ಕೆ ಈ ಬಾರಿ ಇನ್ನಷ್ಟು ಮೆರಗು

ಮೈಸೂರು :ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್‌ ದೀಪಾಲಂಕಾರವನ್ನು ಈ ಬಾರಿ ಹೊಸ ವಿನ್ಯಾಸಗಳ ಜತೆಗೆ ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ ಆಕರ್ಷಣೀಯವಾಗಿಸಲು ಆಸಕ್ತಿವಹಿಸಿ ಕೆಲಸ ಮಾಡಿ ಎಂದು ಅಧಿಕಾರಿಗಳು ಹಾಗೂ ದೀಪಾಲಂಕಾರ ಮಾಡುವ ವಿದ್ಯುತ್‌ ಗುತ್ತಿಗೆದಾರರಿಗೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ಸಲಹೆ ನೀಡಿದರು.

ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಈ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, “ದಸರಾ ಮಹೋತ್ಸವದ ಸಂದರ್ಭದಲ್ಲಿ ಮಾಡಲಾಗುವ ವಿದ್ಯುತ್‌ ದೀಪಾಲಂಕಾರ ಎಲ್ಲರ ಗಮನ ಸೆಳೆಯಲಿದೆ. ಹೀಗಾಗಿ ಈ ಬಾರಿಯ ವಿದ್ಯುತ್‌ ದೀಪಾಲಂಕಾರವನ್ನು ಕಳೆದ ವರ್ಷಕ್ಕಿಂತ ಹೆಚ್ಚು ಆಕರ್ಷಕವಾಗಿ ಮಾಡಲು ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಿಗಮದ ವತಿಯಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ” ಎಂದರು.

“ದಸರಾ ದೀಪಾಲಂಕಾರ ವಿಶ್ವಮಟ್ಟದಲ್ಲಿ ಆಕರ್ಷಣೀಯಗೊಳಿಸಲು ಸೆಸ್ಕ್‌ ಜತೆಗೆ ವಿದ್ಯುತ್‌ ಗುತ್ತಿಗೆದಾರರು ಪ್ರಮುಖ ಕಾರಣರಾಗಿದ್ದಾರೆ. ಪ್ರತಿವರ್ಷದ ರೀತಿಯಲ್ಲಿ ಈ ಬಾರಿಯೂ ಸಹ ವಿದ್ಯುತ್‌ ದೀಪಾಲಂಕಾರದ ಬಗ್ಗೆ ನಿರೀಕ್ಷೆ ಕೂಡ ಹೆಚ್ಚಾಗಿದೆ. ದಸರಾ ಆರಂಭದಲ್ಲಿ ಹಾಗೂ ದಸರಾ ಮುಗಿದ ಬಳಿಕವೂ ಎಲ್ಲರನ್ನೂ ಆಕರ್ಷಿಸುವ ದೀಪಾಲಂಕಾರವನ್ನು ಹೊಸತನದ ಜತೆಗೆ ಹೆಚ್ಚು ಆಕರ್ಷಕವಾಗಿ ಮಾಡುವ ಬಗ್ಗೆ ಈಗಿನಿಂದಲೇ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದೆ. ದೀಪಾಲಂಕಾರವನ್ನು ಹೆಚ್ಚಿನ ಆಕರ್ಷಣೀಯವಾಗಿ ಮಾಡುವುದು ಮಾತ್ರವಲ್ಲದೇ ಆರ್ಥಿಕವಾಗಿ ಹೊರೆಯಾಗದ ರೀತಿಯಲ್ಲಿ ದೀಪಾಲಂಕಾರ ಮಾಡುವುದು ಮುಖ್ಯ” ಎಂದು ಸಲಹೆ ನೀಡಿದರು.

ಸುರಕ್ಷತೆಗೆ ಆದ್ಯತೆ ನೀಡಿ ; “ದಸರಾ ದೀಪಾಲಂಕಾರದ ಸೌಂದರ್ಯ ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ಆಗಮಿಸುತ್ತಾರೆ. ಆದ್ದರಿಂದ ದೀಪಾಲಂಕಾರದ ಅಂದವನ್ನು ಹೆಚ್ಚಿಸುವುದರ ಜತೆಗೆ ಸುರಕ್ಷತೆಗೂ ಆದ್ಯತೆ ನೀಡುವುದು ಮುಖ್ಯವಾಗಿದೆ. ದಸರಾ ವೇಳೆಯಲ್ಲಿ ಮಳೆಯಾಗುವ ಸಂಭವ ಹೆಚ್ಚಾಗಿರಲಿದೆ. ಆದ್ದರಿಂದ ಮಳೆ ಹಾಗೂ ಇನ್ನಿತರ ಸಂದರ್ಭಗಳಲ್ಲಿ ಯಾವುದೇ ತೊಂದರೆಗಳು ಉಂಟಾಗದಂತೆ ಎಚ್ಚರವಹಿಸಿ, ದೀಪಾಲಂಕಾರ ಮಾಡುವಲ್ಲಿ ಹೆಚ್ಚಿನ ಗಮನವಹಿಸಬೇಕೆಂದು” ವಿದ್ಯುತ್‌ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ರೂಪುರೇಷೆಗಳು ಸಿದ್ಧ ; “ದಸರಾ ಜಂಬೂಸವಾರಿ ಮೆರವಣಿಗೆ ಸಾಗುವ ರಾಜಮಾರ್ಗದಲ್ಲಿ ಈ ಬಾರಿ ಆಕರ್ಷಕ ರೀತಿಯಲ್ಲಿ ದೀಪಾಲಂಕಾರ ಮಾಡಲು ಚಿಂತನೆ ನಡೆಸಲಾಗಿದೆ. ಜತೆಗೆ ನಗರದಲ್ಲಿರುವ ವೃತ್ತಗಳಲ್ಲಿ ವಿನೂತನ ರೀತಿಯಲ್ಲಿ ದೀಪಾಲಂಕಾರ ಮಾಡಬೇಕೆಂದು ನಿರ್ಧರಿಸಿದ್ದು, ಇದಕ್ಕಾಗಿ ಅಗತ್ಯವಿರುವ ರೂಪುರೇಷೆಗಳು, ಕೆಲವೊಂದು ಡಿಸೈನ್‌ಗಳನ್ನು ಈಗಾಗಲೇ ಸಿದ್ಧಪಡಿಸಲಾಗುತ್ತಿದೆ” ಎಂದರು.

ಪೂರ್ವಸಿದ್ಧತೆ ಇರಲಿ ; “ದಸರಾ ಮಹೋತ್ಸವದ ಆರಂಭದಿಂದಲೇ ವಿದ್ಯುತ್‌ ದೀಪಾಲಂಕಾರಕ್ಕೂ ಚಾಲನೆ ದೊರೆಯಲಿದೆ. ಹೀಗಾಗಿ ದೀಪಾಲಂಕಾರ ಮಾಡುವ ಜವಾಬ್ದಾರಿ ಹೊತ್ತವರು ಕೊನೆಯ ಹಂತದವರೆಗೂ ಕೆಲಸ ಮಾಡದೆ, ಪೂರ್ವಸಿದ್ಧತೆ ಮಾಡಿಕೊಳ್ಳಬೇಕಿದೆ. ಕಳೆದ ಬಾರಿ ಕೆಲವೊಂದು ರಸ್ತೆಗಳಲ್ಲಿ ಮಾಡಲಾಗಿದ್ದ ದೀಪಾಲಂಕಾರ ನಿರೀಕ್ಷಿತ ಮಟ್ಟದಲ್ಲಿ ಇರಲಿಲ್ಲ. ಹೀಗಾಗಿ ಈ ಬಾರಿ ಇಂತಹ ಸಮಸ್ಯೆಗಳು ಆಗದಂತೆ ನಿಗಾವಹಿಸಿ, ನಿಗದಿತ ಸಮಯಕ್ಕೆ ದೀಪಾಲಂಕಾರದ ಕೆಲಸಗಳನ್ನು ಪೂರ್ಣಗೊಳಿಸಿ” ಎಂದು ಸೂಚಿಸಿದರು.

“ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳ ಸುತ್ತಲಿನ ರಸ್ತೆಗಳು ಹಾಗೂ ವೃತ್ತಗಳಲ್ಲಿ ದೀಪಾಲಂಕಾರ ಹೆಚ್ಚಿನ ಆಕರ್ಷಣೆಯಿಂದ ಕೂಡಿರಬೇಕಿದೆ. ಯುವ ಸಂಭ್ರಮ ಕಾರ್ಯಕ್ರಮ ದಸರಾ ಆರಂಭಕ್ಕೂ ಮೊದಲೇ ನಡೆಯುವುದರಿಂದ ಈ ಸ್ಥಳದಲ್ಲಿ ಮಾಡಲಾಗುವ ದೀಪಾಲಂಕಾರ ಎಲ್ಲರ ಆಕರ್ಷಣೆ ಮತ್ತು ಕುತೂಹಲವನ್ನು ಹೆಚ್ಚುವಂತೆ ಮಾಡುತ್ತದೆ. ಆದ್ದರಿಂದ ಈ ಭಾಗಗಳಲ್ಲಿ ದೀಪಾಲಂಕಾರ ಮಾಡುವವರು ಇದನ್ನು ಗಮನದಲ್ಲಿಟ್ಟುಕೊಂಡು ದೀಪಾಲಂಕಾರ ಮಾಡಬೇಕಿದೆ” ಎಂದು ಸಲಹೆ ನೀಡಿದರು.

ಡ್ರೋನ್‌ ಶೋಗೆ ಇನ್ನಷ್ಟು ಮೆರಗು ; “ಕಳೆದ ವರ್ಷದ ದಸರಾ ಸಂದರ್ಭದಲ್ಲಿ ನಡೆದ ಡ್ರೋನ್‌ ಪ್ರದರ್ಶನ ಎಲ್ಲರ ಆಕರ್ಷಣೆ ಮತ್ತು ಮೆಚ್ಚುಗೆ ಪಡೆದಿತ್ತು. ಹೀಗಾಗಿ ಡ್ರೋನ್‌ ಶೋ ಕುರಿತಂತೆ ಜನರ ನಿರೀಕ್ಷೆಗಳು ಹೆಚ್ಚಾಗಿರಲಿದೆ. ಆದ್ದರಿಂದ ಈ ಬಾರಿಯ ಡ್ರೋನ್‌ ಶೋ ಕಾರ್ಯಕ್ರಮದ ಮೆರಗು ಹೆಚ್ಚಿಸುವ ನಿಟ್ಟಿನಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಡ್ರೋನ್‌ ಬಳಸಿ ಹೆಚ್ಚು ಆಕರ್ಷಣೀಯವಾಗಿಸಲು ಚಿಂತನೆ ನಡೆಸಲಾಗುತ್ತಿದೆ” ಎಂದು ಕೆ.ಎಂ. ಮುನಿಗೋಪಾಲ್‌ ರಾಜು ಅವರು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ನಿಗಮದ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್‌, ಮೈಸೂರು ವಲಯ ಕಚೇರಿಯ ಮುಖ್ಯ ಇಂಜಿನಿಯರ್‌ ಮೃತ್ಯುಂಜಯ, ಮೈಸೂರು ವೃತ್ತದ ಅಧೀಕ್ಷಕ ಇಂಜಿನಿಯರ್ ಸುನೀಲ್, ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದ ಅಧ್ಯಕ್ಷ ರಮೇಶ್‌ ಸೇರಿದಂತೆ ಸೆಸ್ಕ್‌ನ ಪ್ರಮುಖ ಅಧಿಕಾರಿಗಳು ಹಾಗೂ ವಿದ್ಯುತ್‌ ಗುತ್ತಿಗೆದಾರರು ಇದ್ದರು.

ಆಂದೋಲನ ಡೆಸ್ಕ್

Recent Posts

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

9 mins ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

52 mins ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

1 hour ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

2 hours ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

2 hours ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

3 hours ago