ನಂಜನಗೂಡು: ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕಪಿಲಾ ನದಿಗೆ ಬಿಡಲಾಗಿದ್ದು, ನಂಜನಗೂಡಿನ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ.
ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕಪಿನಾ ನದಿಗೆ ಬಿಡಲಾಗಿದ್ದು, ಕಪಿಲೆ ತನ್ನ ರೌದ್ರಾವತಾರ ತಾಳಿದ್ದಾಳೆ. ನದಿಯ ಹರಿವು ಹೆಚ್ಚಾಗಿರುವ ಪರಿಣಾಮ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸ್ನಾನಘಟ್ಟ ಮತ್ತು ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ಈ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರವಾಹಪೀಡಿತ ಹಳ್ಳಿಕೇರಿ, ಹದಿನಾರು ಕಾಲು ಮಂಟಪ, ಸ್ನಾನಘಟ್ಟ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿದ ಲಕ್ಷ್ಮೀಕಾಂತರೆಡ್ಡಿ ಅವರು, ತುರ್ತು ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ ಹಳ್ಳದಕೇರಿ ಬಡಾವಣೆ ಸಾರ್ವಜನಿಕರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅವರು, ಯಾವುದೇ ಭಯಪಡಬೇಡಿ, ನಿಮಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಜವಾಬ್ದಾರಿ ನಮ್ಮದು ಎಂದು ಭರವಸೆ ನೀಡಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…