ಮೈಸೂರು

ಮೈಸೂರು: ದಸರಾ ಗಜಪಡೆಗೆ ಆತ್ಮೀಯ ಬಿಳ್ಕೋಡುಗೆ

ಮೈಸೂರು : ನಾಡಹಬ್ಬ ದಸರಾದ ಕೇಂದ್ರ ಬಿಂದುಗಳಾಗಿ ಅರಮನೆ ಆವರಣದಲ್ಲಿ ಅತಿಥ್ಯದ ಅತಿಥಿಗಳಾಗಿದ್ದ ಗಜಪಡೆಗಳನ್ನು ಹೋಗಿ ಬನ್ನಿ ಮತ್ತೆ ಸಿಗೋಣ ಎಂಬಂತೆ ಆತ್ಮೀಯವಾಗಿ ಬೀಳ್ಕೊಡಲಾಯಿತು.

ಗುರುವಾರ ಬೆಳಿಗ್ಗೆ 11ಕ್ಕೆ ಗಜಪಡೆಯ ಮಾವುತ ಹಾಗೂ ಕಾವಾಡಿಗಳನ್ನು ಅರಮನೆ ಆಡಳಿತ ಮಂಡಳಿಯಿಂದ ಯಶಸ್ವಿ ಜಂಬೂ ಸವಾರಿ ನಡೆಸಿಕೊಟ್ಟ ಹಿನ್ನೆಲೆಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ನಂತರ ಗಜಪಡೆಗಳೊಂದಿಗೆ ನೆನಪಿನ ಚಿತ್ರ ತೆಗೆದು ಆತ್ಮೀಯವಾಗಿ ಕಳುಹಿಸಿಕೊಡಲಾಯಿತು.

ಆ ಮೂಲಕ ಕಳೆದ ಒಂದೂವರೆ ತಿಂಗಳಿಂದ ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದ ಗಜಪಡೆಗಳಾದ ಅಭಿಮನ್ಯು, ಅರ್ಜುನ, ದನಂಜಯ, ಮಹೇಂದ್ರ, ಲಕ್ಷ್ಮಿ, ವರಲಕ್ಷ್ಮಿ, ಭೀಮ, ಕಂಜನ್, ಗೋಪಿ, ಹಿರಣ್ಯ, ಸುಗ್ರೀವ, ವಿಜಯ, ರೋಹಿತ್ ಹಾಗೂ ಪ್ರಶಾಂತ್ ಆನೆಗಳು ಯಶಸ್ವಿ ಜಂಬೂ ಸವಾರಿಯಲ್ಲಿ ತಮ್ಮ ಪಾತ್ರ ಮುಗಿಸಿ ಕಾಡಿನತ್ತ ತೆರಳಲು ಸಿದ್ಧತೆ ನಡೆಸಿದವು.

ಇತ್ತ ಅವುಗಳೊಟ್ಟಿಗೆ ಆಗಮಿಸಿದ್ದ ಕಾವಾಡಿ ಹಾಗೂ ಮಾವುತರ ಕುಟುಂಬದವರು ಹಾಗೂ ಮಕ್ಕಳು ಸಹ ನಗರ ಬಿಟ್ಟು ತಮ್ಮ ನೆಲೆಗಳತ್ತ ಹಿಂದುರುಗಲು ತಯಾರಿ ನಡೆಸಿದ ದೃಶ್ಯ ಕಂಡು ಬಂದಿತು. ಈ ವೇಳೆ ನೆರೆದಿದ್ದವರೆಲ್ಲರೂ ಹೋಗಿ ಬನ್ನಿ ಮತ್ತೆ ಮುಂದಿನ ದಸರೆಗೆ ಸಿಗೋಣ ಎಂಬಂತೆ ಬೀಳ್ಕೊಡುತ್ತಿದ್ದ ದೃಶ್ಯ ಕಂಡು ಬಂದಿತು.

andolanait

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

4 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

4 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

5 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

5 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

5 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

5 hours ago