ಮೈಸೂರು : ನಾಡಹಬ್ಬ ದಸರಾದ ಕೇಂದ್ರ ಬಿಂದುಗಳಾಗಿ ಅರಮನೆ ಆವರಣದಲ್ಲಿ ಅತಿಥ್ಯದ ಅತಿಥಿಗಳಾಗಿದ್ದ ಗಜಪಡೆಗಳನ್ನು ಹೋಗಿ ಬನ್ನಿ ಮತ್ತೆ ಸಿಗೋಣ ಎಂಬಂತೆ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಗುರುವಾರ ಬೆಳಿಗ್ಗೆ 11ಕ್ಕೆ ಗಜಪಡೆಯ ಮಾವುತ ಹಾಗೂ ಕಾವಾಡಿಗಳನ್ನು ಅರಮನೆ ಆಡಳಿತ ಮಂಡಳಿಯಿಂದ ಯಶಸ್ವಿ ಜಂಬೂ ಸವಾರಿ ನಡೆಸಿಕೊಟ್ಟ ಹಿನ್ನೆಲೆಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ನಂತರ ಗಜಪಡೆಗಳೊಂದಿಗೆ ನೆನಪಿನ ಚಿತ್ರ ತೆಗೆದು ಆತ್ಮೀಯವಾಗಿ ಕಳುಹಿಸಿಕೊಡಲಾಯಿತು.
ಆ ಮೂಲಕ ಕಳೆದ ಒಂದೂವರೆ ತಿಂಗಳಿಂದ ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದ ಗಜಪಡೆಗಳಾದ ಅಭಿಮನ್ಯು, ಅರ್ಜುನ, ದನಂಜಯ, ಮಹೇಂದ್ರ, ಲಕ್ಷ್ಮಿ, ವರಲಕ್ಷ್ಮಿ, ಭೀಮ, ಕಂಜನ್, ಗೋಪಿ, ಹಿರಣ್ಯ, ಸುಗ್ರೀವ, ವಿಜಯ, ರೋಹಿತ್ ಹಾಗೂ ಪ್ರಶಾಂತ್ ಆನೆಗಳು ಯಶಸ್ವಿ ಜಂಬೂ ಸವಾರಿಯಲ್ಲಿ ತಮ್ಮ ಪಾತ್ರ ಮುಗಿಸಿ ಕಾಡಿನತ್ತ ತೆರಳಲು ಸಿದ್ಧತೆ ನಡೆಸಿದವು.
ಇತ್ತ ಅವುಗಳೊಟ್ಟಿಗೆ ಆಗಮಿಸಿದ್ದ ಕಾವಾಡಿ ಹಾಗೂ ಮಾವುತರ ಕುಟುಂಬದವರು ಹಾಗೂ ಮಕ್ಕಳು ಸಹ ನಗರ ಬಿಟ್ಟು ತಮ್ಮ ನೆಲೆಗಳತ್ತ ಹಿಂದುರುಗಲು ತಯಾರಿ ನಡೆಸಿದ ದೃಶ್ಯ ಕಂಡು ಬಂದಿತು. ಈ ವೇಳೆ ನೆರೆದಿದ್ದವರೆಲ್ಲರೂ ಹೋಗಿ ಬನ್ನಿ ಮತ್ತೆ ಮುಂದಿನ ದಸರೆಗೆ ಸಿಗೋಣ ಎಂಬಂತೆ ಬೀಳ್ಕೊಡುತ್ತಿದ್ದ ದೃಶ್ಯ ಕಂಡು ಬಂದಿತು.
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ…
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…
ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್…