ಮೈಸೂರು : ನಾಡಹಬ್ಬ ದಸರಾದ ಕೇಂದ್ರ ಬಿಂದುಗಳಾಗಿ ಅರಮನೆ ಆವರಣದಲ್ಲಿ ಅತಿಥ್ಯದ ಅತಿಥಿಗಳಾಗಿದ್ದ ಗಜಪಡೆಗಳನ್ನು ಹೋಗಿ ಬನ್ನಿ ಮತ್ತೆ ಸಿಗೋಣ ಎಂಬಂತೆ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಗುರುವಾರ ಬೆಳಿಗ್ಗೆ 11ಕ್ಕೆ ಗಜಪಡೆಯ ಮಾವುತ ಹಾಗೂ ಕಾವಾಡಿಗಳನ್ನು ಅರಮನೆ ಆಡಳಿತ ಮಂಡಳಿಯಿಂದ ಯಶಸ್ವಿ ಜಂಬೂ ಸವಾರಿ ನಡೆಸಿಕೊಟ್ಟ ಹಿನ್ನೆಲೆಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ನಂತರ ಗಜಪಡೆಗಳೊಂದಿಗೆ ನೆನಪಿನ ಚಿತ್ರ ತೆಗೆದು ಆತ್ಮೀಯವಾಗಿ ಕಳುಹಿಸಿಕೊಡಲಾಯಿತು.
ಆ ಮೂಲಕ ಕಳೆದ ಒಂದೂವರೆ ತಿಂಗಳಿಂದ ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದ ಗಜಪಡೆಗಳಾದ ಅಭಿಮನ್ಯು, ಅರ್ಜುನ, ದನಂಜಯ, ಮಹೇಂದ್ರ, ಲಕ್ಷ್ಮಿ, ವರಲಕ್ಷ್ಮಿ, ಭೀಮ, ಕಂಜನ್, ಗೋಪಿ, ಹಿರಣ್ಯ, ಸುಗ್ರೀವ, ವಿಜಯ, ರೋಹಿತ್ ಹಾಗೂ ಪ್ರಶಾಂತ್ ಆನೆಗಳು ಯಶಸ್ವಿ ಜಂಬೂ ಸವಾರಿಯಲ್ಲಿ ತಮ್ಮ ಪಾತ್ರ ಮುಗಿಸಿ ಕಾಡಿನತ್ತ ತೆರಳಲು ಸಿದ್ಧತೆ ನಡೆಸಿದವು.
ಇತ್ತ ಅವುಗಳೊಟ್ಟಿಗೆ ಆಗಮಿಸಿದ್ದ ಕಾವಾಡಿ ಹಾಗೂ ಮಾವುತರ ಕುಟುಂಬದವರು ಹಾಗೂ ಮಕ್ಕಳು ಸಹ ನಗರ ಬಿಟ್ಟು ತಮ್ಮ ನೆಲೆಗಳತ್ತ ಹಿಂದುರುಗಲು ತಯಾರಿ ನಡೆಸಿದ ದೃಶ್ಯ ಕಂಡು ಬಂದಿತು. ಈ ವೇಳೆ ನೆರೆದಿದ್ದವರೆಲ್ಲರೂ ಹೋಗಿ ಬನ್ನಿ ಮತ್ತೆ ಮುಂದಿನ ದಸರೆಗೆ ಸಿಗೋಣ ಎಂಬಂತೆ ಬೀಳ್ಕೊಡುತ್ತಿದ್ದ ದೃಶ್ಯ ಕಂಡು ಬಂದಿತು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…