ಮೈಸೂರು : ನಾಡಹಬ್ಬ ದಸರಾದ ಕೇಂದ್ರ ಬಿಂದುಗಳಾಗಿ ಅರಮನೆ ಆವರಣದಲ್ಲಿ ಅತಿಥ್ಯದ ಅತಿಥಿಗಳಾಗಿದ್ದ ಗಜಪಡೆಗಳನ್ನು ಹೋಗಿ ಬನ್ನಿ ಮತ್ತೆ ಸಿಗೋಣ ಎಂಬಂತೆ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಗುರುವಾರ ಬೆಳಿಗ್ಗೆ 11ಕ್ಕೆ ಗಜಪಡೆಯ ಮಾವುತ ಹಾಗೂ ಕಾವಾಡಿಗಳನ್ನು ಅರಮನೆ ಆಡಳಿತ ಮಂಡಳಿಯಿಂದ ಯಶಸ್ವಿ ಜಂಬೂ ಸವಾರಿ ನಡೆಸಿಕೊಟ್ಟ ಹಿನ್ನೆಲೆಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ನಂತರ ಗಜಪಡೆಗಳೊಂದಿಗೆ ನೆನಪಿನ ಚಿತ್ರ ತೆಗೆದು ಆತ್ಮೀಯವಾಗಿ ಕಳುಹಿಸಿಕೊಡಲಾಯಿತು.
ಆ ಮೂಲಕ ಕಳೆದ ಒಂದೂವರೆ ತಿಂಗಳಿಂದ ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದ ಗಜಪಡೆಗಳಾದ ಅಭಿಮನ್ಯು, ಅರ್ಜುನ, ದನಂಜಯ, ಮಹೇಂದ್ರ, ಲಕ್ಷ್ಮಿ, ವರಲಕ್ಷ್ಮಿ, ಭೀಮ, ಕಂಜನ್, ಗೋಪಿ, ಹಿರಣ್ಯ, ಸುಗ್ರೀವ, ವಿಜಯ, ರೋಹಿತ್ ಹಾಗೂ ಪ್ರಶಾಂತ್ ಆನೆಗಳು ಯಶಸ್ವಿ ಜಂಬೂ ಸವಾರಿಯಲ್ಲಿ ತಮ್ಮ ಪಾತ್ರ ಮುಗಿಸಿ ಕಾಡಿನತ್ತ ತೆರಳಲು ಸಿದ್ಧತೆ ನಡೆಸಿದವು.
ಇತ್ತ ಅವುಗಳೊಟ್ಟಿಗೆ ಆಗಮಿಸಿದ್ದ ಕಾವಾಡಿ ಹಾಗೂ ಮಾವುತರ ಕುಟುಂಬದವರು ಹಾಗೂ ಮಕ್ಕಳು ಸಹ ನಗರ ಬಿಟ್ಟು ತಮ್ಮ ನೆಲೆಗಳತ್ತ ಹಿಂದುರುಗಲು ತಯಾರಿ ನಡೆಸಿದ ದೃಶ್ಯ ಕಂಡು ಬಂದಿತು. ಈ ವೇಳೆ ನೆರೆದಿದ್ದವರೆಲ್ಲರೂ ಹೋಗಿ ಬನ್ನಿ ಮತ್ತೆ ಮುಂದಿನ ದಸರೆಗೆ ಸಿಗೋಣ ಎಂಬಂತೆ ಬೀಳ್ಕೊಡುತ್ತಿದ್ದ ದೃಶ್ಯ ಕಂಡು ಬಂದಿತು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…