ಮೈಸೂರು

ಮೈಸೂರು: ದಸರಾ ಗಜಪಡೆಗೆ ಆತ್ಮೀಯ ಬಿಳ್ಕೋಡುಗೆ

ಮೈಸೂರು : ನಾಡಹಬ್ಬ ದಸರಾದ ಕೇಂದ್ರ ಬಿಂದುಗಳಾಗಿ ಅರಮನೆ ಆವರಣದಲ್ಲಿ ಅತಿಥ್ಯದ ಅತಿಥಿಗಳಾಗಿದ್ದ ಗಜಪಡೆಗಳನ್ನು ಹೋಗಿ ಬನ್ನಿ ಮತ್ತೆ ಸಿಗೋಣ ಎಂಬಂತೆ ಆತ್ಮೀಯವಾಗಿ ಬೀಳ್ಕೊಡಲಾಯಿತು.

ಗುರುವಾರ ಬೆಳಿಗ್ಗೆ 11ಕ್ಕೆ ಗಜಪಡೆಯ ಮಾವುತ ಹಾಗೂ ಕಾವಾಡಿಗಳನ್ನು ಅರಮನೆ ಆಡಳಿತ ಮಂಡಳಿಯಿಂದ ಯಶಸ್ವಿ ಜಂಬೂ ಸವಾರಿ ನಡೆಸಿಕೊಟ್ಟ ಹಿನ್ನೆಲೆಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ನಂತರ ಗಜಪಡೆಗಳೊಂದಿಗೆ ನೆನಪಿನ ಚಿತ್ರ ತೆಗೆದು ಆತ್ಮೀಯವಾಗಿ ಕಳುಹಿಸಿಕೊಡಲಾಯಿತು.

ಆ ಮೂಲಕ ಕಳೆದ ಒಂದೂವರೆ ತಿಂಗಳಿಂದ ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದ ಗಜಪಡೆಗಳಾದ ಅಭಿಮನ್ಯು, ಅರ್ಜುನ, ದನಂಜಯ, ಮಹೇಂದ್ರ, ಲಕ್ಷ್ಮಿ, ವರಲಕ್ಷ್ಮಿ, ಭೀಮ, ಕಂಜನ್, ಗೋಪಿ, ಹಿರಣ್ಯ, ಸುಗ್ರೀವ, ವಿಜಯ, ರೋಹಿತ್ ಹಾಗೂ ಪ್ರಶಾಂತ್ ಆನೆಗಳು ಯಶಸ್ವಿ ಜಂಬೂ ಸವಾರಿಯಲ್ಲಿ ತಮ್ಮ ಪಾತ್ರ ಮುಗಿಸಿ ಕಾಡಿನತ್ತ ತೆರಳಲು ಸಿದ್ಧತೆ ನಡೆಸಿದವು.

ಇತ್ತ ಅವುಗಳೊಟ್ಟಿಗೆ ಆಗಮಿಸಿದ್ದ ಕಾವಾಡಿ ಹಾಗೂ ಮಾವುತರ ಕುಟುಂಬದವರು ಹಾಗೂ ಮಕ್ಕಳು ಸಹ ನಗರ ಬಿಟ್ಟು ತಮ್ಮ ನೆಲೆಗಳತ್ತ ಹಿಂದುರುಗಲು ತಯಾರಿ ನಡೆಸಿದ ದೃಶ್ಯ ಕಂಡು ಬಂದಿತು. ಈ ವೇಳೆ ನೆರೆದಿದ್ದವರೆಲ್ಲರೂ ಹೋಗಿ ಬನ್ನಿ ಮತ್ತೆ ಮುಂದಿನ ದಸರೆಗೆ ಸಿಗೋಣ ಎಂಬಂತೆ ಬೀಳ್ಕೊಡುತ್ತಿದ್ದ ದೃಶ್ಯ ಕಂಡು ಬಂದಿತು.

andolanait

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

5 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

5 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

5 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

5 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

5 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

5 hours ago