ಮೈಸೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಕ್ಕೆ ಸರ್ಕಾರವೇ ಅಡ್ಡಗಾಲು ಹಾಕುತ್ತಿರುವುದು ಸರಿಯಲ್ಲ. ಕೂಡಲೇ ಈ ಸಂಬಂಧ ನ್ಯಾಯಾಯಲದಲ್ಲಿ ಇರುವ ತಡೆಯಾಜ್ಞೆ ತೆರವಿಗೆ ಸರ್ಕಾರ ಕ್ರಮ ವಹಿಸಬೇಕು ಎಂದು ಯುಜಿಸಿ ಅರ್ಹತೆ ಹೊಂದಿರುವ ನಿರುದ್ಯೋಗಿ ಎಚ್.ಡಿ. ಕೋಟೆ ತಾಲ್ಲೂಕು ಮುಳ್ಳೂರಿನ ಎಂ.ಆರ್. ಮಹೇಶ ಒತ್ತಾಯಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 2024ರ ಮೇ ನಲ್ಲಿ ಹೈಕೋರ್ಟ್ ಆದೇಶ ಹೊರಡಿಸಿ, ಯುಜಿಸಿ ಅರ್ಹತೆ ಪಡೆದಿರುವವರಿಗೆ ಮಾತ್ರ ಅತಿಥಿ ಉಪನ್ಯಾಸಕ ಹುದ್ದೆ ನೀಡಬೇಕೆಂದು ತಿಳಿಸಿದೆ. ಆದರೆ, ಸರ್ಕಾರ ಈ ಅರ್ಹತೆ ಇಲ್ಲದವರಿಗೂ ಅನುಕೂಲವಾಗಲೆಂಬ ಉದ್ದೇಶದಿಂದ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ. ಜೊತೆಗೆ ವಿದ್ಯಾರ್ಥಿಗಳ ಹಿತದೃಷ್ಟಿ ಎಂಬ ಕಾರಣ ನೀಡಿ ಆ ವೇಳೆಗಾಗಲೇ ಅತಿಥಿ ಉಪನ್ಯಾಸಕರಾಗಿದ್ದವರನ್ನು ತಾತ್ಕಾಲಿಕವಾಗಿ ಮುಂದುವರಿಸಿತು. ಈ ನಡುವೆ ಇನ್ನಿತರ ಬೆಳವಣಿಗೆಗಳೂ ಆಗಿದ್ದು, ಯುಜಿಸಿ ಅರ್ಹತೆ ಹೊಂದಿರುವ ಸುಮಾರು ಐದು ಸಾವಿರ ಮಂದಿ ನೇಮಕಾತಿಗಾಗಿ ಕಾಯ್ದು ಕುಳಿತಿದ್ದಾರೆ. ಹೀಗಾಗಿ ತಡೆಯಾಜ್ಞೆ ತೆರವಿಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಒಂದು ವೇಳೆ ಯುಜಿಸಿ ಅರ್ಹತೆ ಹೊಂದಿರುವವರನ್ನು ನೇಮಕ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರೂ ತಾವು ಕೂಲಿ ಕೆಲಸ ಮಾಡಿಕೊಂಡಾದರೂ ಬದುಕುತ್ತೇವೆ. ಆದ್ದರಿಂದ ಸರ್ಕಾರ ಯುಜಿಸಿ ಅರ್ಹತೆ ಹೊಂದಿರುವವರ ನೇಮಕಾತಿಗೆ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.
ಡಾ. ಲಿಂಗರಾಜು, ಎ.ಸಿ. ಚಂದ್ರಶೇಖರ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…