ಮೈಸೂರು

ಯೋಗವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ : ಶಾಸಕ ಶ್ರೀವತ್ಸ

ಮೈಸೂರು : ಯೋಗವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ ಎಂದು ಶಾಸಕ ಶ್ರೀವತ್ಸ ಹೇಳಿದರು.

ನಗರದ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದಲ್ಲಿರುವ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೇ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಕ್ಷಿಣ ಭಾರತದ ಕರ್ನಾಟಕ ರಾಜ್ಯದಲ್ಲಿರುವ ಮೈಸೂರು ವಿಶ್ವ ರಾಜಧಾನಿ ಎಂದು ಗುರುತಿಸಲ್ಪಟ್ಟಿದೆ. ರಾಜಮನೆತನದ ಗತಕಾಲವನ್ನು ಹೊಂದಿರುವ ಮೈಸೂರು ನಗರವು ಯೋಗ ಅಭ್ಯಾಸವನ್ನು ಮಾಡಲು ಬರುವ ಯೋಗ ಆಸಕ್ತರಿಗೆ ಜನಪ್ರಿಯ ತಾಣವಾಗಿದೆ. ಯೋಗವನ್ನು ನಾನು ಅಭ್ಯಾಸ ವಾಡುತ್ತಿದ್ದೇನೆ ಮುಂದಿನ ದಸರಾದಲ್ಲಿ ಯೋಗ ಪ್ರದರ್ಶನ ಮಾಡಲು ಪ್ರಶಂಸುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಯೋಗ ದಸರ ಉಪ ಸಮಿತಿಯ ಅಧ್ಯಕ್ಷರಾದ ಎನ್.ನಾಗೇಶ್ ಮಾತನಾಡಿ, ದಸರಾ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ 2000 ಸ್ಪರ್ಧಾರ್ಥಿಗಳು ಭಾಗವಹಿಸಿದ್ದಾರೆ. ಯೋಗ ಮಾಡುವುದು ದೇಹದ ಕಸರತ್ತಿಗಲ್ಲ ಇದು ವಾನಸಿಕ ನೆಮ್ಮದಿ ಹಾಗೂ ಏಕಾಗ್ರತೆ , ಮನಸ್ಸಿಗೆ ಶಾಂತಿಯನ್ನು ನೀಡುತ್ತದೆ. ಯೋಗ ದಸರಾ ಸ್ಫರ್ಧೆ ಕೇವಲ ಸ್ಫರ್ಧೆಯಾಗಿರುವುದಿಲ್ಲ ಉತ್ತಮ ಆರೋಗ್ಯ ತಮತೋಲನ ಕಾಪಾಡಿಕೊಳ್ಳುವ ಸಂದೇಶವನ್ನು ಸಾರುತ್ತದೆ ಎಂದರು.

ಇದನ್ನು ಓದಿ : ದಸರಾ ಸಂಭ್ರಮಕ್ಕೆ ಹೊಸ ಮೆರಗು : ಸೆ.28,29 ರಂದು ಆಕರ್ಷಕ ಡ್ರೋನ್‌ ಪ್ರಾಯೋಗಿಕ ಪ್ರದರ್ಶನ

ಮುಂದಿನ ತಲೆವಾರುಗಳಿಗೆ ಯೋಗದ ಬಗ್ಗೆ ಅರಿವು ಮೂಡಿಸಬೇಕು ಹಾಗೂ ಎಲ್ಲರೂ ಯೋಗ ಮಾಡುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.

ಸ್ಫರ್ಧೆಯಲ್ಲಿ 10 ರಿಂದ 12 ವರ್ಷದ ವಯೋಮಿತಿಯಲ್ಲಿ 385 ಸ್ಪರ್ಧಿಗಳು, 12 ರಿಂದ 14 ವರ್ಷದ ವಯೋಮಿತಿಯಲ್ಲಿ 361 ಸ್ಪರ್ಧಿಗಳು, 14 ರಿಂದ 18 ವರ್ಷದ ವಯೋಮಿತಿಯಲ್ಲಿ 219 ಸ್ಪರ್ಧಿಗಳು, 21 ರಿಂದ ವರ್ಷದ ವಯೋಮಿತಿಯಲ್ಲಿ 94 ಸ್ಪರ್ಧಿಗಳು, 35 ರಿಂದ 45 ವರ್ಷದ ವಯೋಮಿತಿಯಲ್ಲಿ 138 ಸ್ಪರ್ಧಿಗಳು, 45 ರಿಂದ 50 ವರ್ಷದ ವಯೋಮಿತಿಯಲ್ಲಿ 106 ಸ್ಪರ್ಧಿಗಳು, 55 ರಿಂದ 65 ವರ್ಷದ ವಯೋಮಿತಿಯಲ್ಲಿ 49 ಸ್ಪರ್ಧಿಗಳು, 65 ವರ್ಷ ಮೇಲ್ಪಟ್ಟವರು 42 ಸ್ಪರ್ಧಿಗಳು, ವಿಶೇಷ ಚೇತನ ವಿಭಾಗದಲ್ಲಿ 27 ಸ್ಪರ್ಧಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಮಿತಿಯ ಉಪವಿಶೇಷ ಅಧಿಕಾರಿ ಕೆ.ರವ್ಯಾ, ಸಮಿತಿಯ ಕಾರ್ಯಧ್ಯಾಕ್ಷರಾದ ನಿರೂಪ್ ವೆಸ್ಲಿ, ಸಹ ಕಾರ್ಯಧ್ಯಾಕ್ಷರಾದ ಶಿಲ್ಪ, ರೇಣುಕಾದೇವಿ, ಉಪ ಸಮಿತಿಯ ಉಪಾಧ್ಯಕ್ಷರುಗಳಾದ ಪ್ರಸಾದ್ ನಾಡನಹಳ್ಳಿ , ನಂಜುoಡಸ್ವಾಮಿ, ಕೆ.ಜಿ. ದೇವರಾಜ್, ಮಹೇಶ್ ಮತ್ತಿತ್ತರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದಾಖಲೆ ಬಜೆಟ್; ಹಾದಿ ಸುಲಭದ್ದಲ್ಲ

ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ…

43 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಇವರು ಲಕ್ಕಿ ಪೊಲಿಟಿಷಿಯನ್ ಡುಕಾಟಿ ರಾಮಚಂದ್ರಪ್ಪ

ಪಕ್ಷಕ್ಕೆ ಬಹುಮತ ಬಂದರೆ ಸಿಎಂ, ಬರದಿದ್ದರೆ ಪ್ರತಿಪಕ್ಷ ನಾಯಕರಾಗುವ ಪ್ರಭಾವಿ ವ್ಯಕ್ತಿ ವೇಗವಾಗಿ ಸಾಗುತ್ತಿದ್ದ ಜೀಪು ಸಂಗನಕಲ್ಲು ಕ್ರಾಸ್ ಬಳಿ…

47 mins ago

ಅಭಿವೃದ್ಧಿಯತ್ತ ಕೊಡಗಿನ ಸರ್ಕಾರಿ ಗೋಶಾಲೆ

ನವೀನ್ ಡಿಸೋಜ ೨೦೨೨ರಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣವಾದ ಗೋಶಾಲೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಮತ್ತಷ್ಟು ಜಾನವಾರುಗಳಿಗೆ ಆಶ್ರಯ ಒದಗಿಸಲು ಚಿಂತನೆ …

55 mins ago

60 ದಿನಗಳಲ್ಲಿ ಕಲ್ಲಂಗಡಿ ಬೆಳೆದು ಲಾಭ ಗಳಿಸಿದ ರೈತ

ಮಾಗಳಿ ರಾಮೇಗೌಡ ಬೆಟ್ಟದಪುರ: ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಒಂದೂವರೆ ಲಕ್ಷ…

59 mins ago

108 ವರ್ಷಗಳ ಶಾಲೆಯಲ್ಲಿ ನೂರಾರು ಮಕ್ಕಳ ಕಲರವ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ವಯಸ್ಸಾದವರು ಈ ಶಾಲೆಯನ್ನು ನೋಡಿದರೆ, ತಮ್ಮ ಬಾಲ್ಯದ ನೆನಪುಗಳಿಗೆ ರೆಕ್ಕೆಪುಕ್ಕ…

1 hour ago

ಮೈಸೂರು ಜಿಲ್ಲೆಗೆ 13 ನಮ್ಮ ಕ್ಲಿನಿಕ್ ಮಂಜೂರು

ಕೆ.ಬಿ.ರಮೇಶನಾಯಕ ಯಾತ್ರಾಸ್ಥಳ ಚಾಮುಂಡಿಬೆಟ್ಟ, ಅಲ್ಪಸಂಖ್ಯಾತರು ಹೆಚ್ಚಿರುವ ಬಡೇಮಕಾನ್‌ನಲ್ಲಿ ಶೀಘ್ರ ಆರಂಭ ಮೈಸೂರು: ನಗರ ಪ್ರದೇಶದ ಜನರಿಗೆ ಸ್ಥಳೀಯವಾಗಿ ಚಿಕಿತ್ಸೆ ದೊರೆಯುವಂತೆ…

1 hour ago