ಮೈಸೂರು : ಯೋಗವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ ಎಂದು ಶಾಸಕ ಶ್ರೀವತ್ಸ ಹೇಳಿದರು.
ನಗರದ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದಲ್ಲಿರುವ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೇ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದಕ್ಷಿಣ ಭಾರತದ ಕರ್ನಾಟಕ ರಾಜ್ಯದಲ್ಲಿರುವ ಮೈಸೂರು ವಿಶ್ವ ರಾಜಧಾನಿ ಎಂದು ಗುರುತಿಸಲ್ಪಟ್ಟಿದೆ. ರಾಜಮನೆತನದ ಗತಕಾಲವನ್ನು ಹೊಂದಿರುವ ಮೈಸೂರು ನಗರವು ಯೋಗ ಅಭ್ಯಾಸವನ್ನು ಮಾಡಲು ಬರುವ ಯೋಗ ಆಸಕ್ತರಿಗೆ ಜನಪ್ರಿಯ ತಾಣವಾಗಿದೆ. ಯೋಗವನ್ನು ನಾನು ಅಭ್ಯಾಸ ವಾಡುತ್ತಿದ್ದೇನೆ ಮುಂದಿನ ದಸರಾದಲ್ಲಿ ಯೋಗ ಪ್ರದರ್ಶನ ಮಾಡಲು ಪ್ರಶಂಸುತ್ತೇನೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಯೋಗ ದಸರ ಉಪ ಸಮಿತಿಯ ಅಧ್ಯಕ್ಷರಾದ ಎನ್.ನಾಗೇಶ್ ಮಾತನಾಡಿ, ದಸರಾ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ 2000 ಸ್ಪರ್ಧಾರ್ಥಿಗಳು ಭಾಗವಹಿಸಿದ್ದಾರೆ. ಯೋಗ ಮಾಡುವುದು ದೇಹದ ಕಸರತ್ತಿಗಲ್ಲ ಇದು ವಾನಸಿಕ ನೆಮ್ಮದಿ ಹಾಗೂ ಏಕಾಗ್ರತೆ , ಮನಸ್ಸಿಗೆ ಶಾಂತಿಯನ್ನು ನೀಡುತ್ತದೆ. ಯೋಗ ದಸರಾ ಸ್ಫರ್ಧೆ ಕೇವಲ ಸ್ಫರ್ಧೆಯಾಗಿರುವುದಿಲ್ಲ ಉತ್ತಮ ಆರೋಗ್ಯ ತಮತೋಲನ ಕಾಪಾಡಿಕೊಳ್ಳುವ ಸಂದೇಶವನ್ನು ಸಾರುತ್ತದೆ ಎಂದರು.
ಇದನ್ನು ಓದಿ : ದಸರಾ ಸಂಭ್ರಮಕ್ಕೆ ಹೊಸ ಮೆರಗು : ಸೆ.28,29 ರಂದು ಆಕರ್ಷಕ ಡ್ರೋನ್ ಪ್ರಾಯೋಗಿಕ ಪ್ರದರ್ಶನ
ಮುಂದಿನ ತಲೆವಾರುಗಳಿಗೆ ಯೋಗದ ಬಗ್ಗೆ ಅರಿವು ಮೂಡಿಸಬೇಕು ಹಾಗೂ ಎಲ್ಲರೂ ಯೋಗ ಮಾಡುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.
ಸ್ಫರ್ಧೆಯಲ್ಲಿ 10 ರಿಂದ 12 ವರ್ಷದ ವಯೋಮಿತಿಯಲ್ಲಿ 385 ಸ್ಪರ್ಧಿಗಳು, 12 ರಿಂದ 14 ವರ್ಷದ ವಯೋಮಿತಿಯಲ್ಲಿ 361 ಸ್ಪರ್ಧಿಗಳು, 14 ರಿಂದ 18 ವರ್ಷದ ವಯೋಮಿತಿಯಲ್ಲಿ 219 ಸ್ಪರ್ಧಿಗಳು, 21 ರಿಂದ ವರ್ಷದ ವಯೋಮಿತಿಯಲ್ಲಿ 94 ಸ್ಪರ್ಧಿಗಳು, 35 ರಿಂದ 45 ವರ್ಷದ ವಯೋಮಿತಿಯಲ್ಲಿ 138 ಸ್ಪರ್ಧಿಗಳು, 45 ರಿಂದ 50 ವರ್ಷದ ವಯೋಮಿತಿಯಲ್ಲಿ 106 ಸ್ಪರ್ಧಿಗಳು, 55 ರಿಂದ 65 ವರ್ಷದ ವಯೋಮಿತಿಯಲ್ಲಿ 49 ಸ್ಪರ್ಧಿಗಳು, 65 ವರ್ಷ ಮೇಲ್ಪಟ್ಟವರು 42 ಸ್ಪರ್ಧಿಗಳು, ವಿಶೇಷ ಚೇತನ ವಿಭಾಗದಲ್ಲಿ 27 ಸ್ಪರ್ಧಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಮಿತಿಯ ಉಪವಿಶೇಷ ಅಧಿಕಾರಿ ಕೆ.ರವ್ಯಾ, ಸಮಿತಿಯ ಕಾರ್ಯಧ್ಯಾಕ್ಷರಾದ ನಿರೂಪ್ ವೆಸ್ಲಿ, ಸಹ ಕಾರ್ಯಧ್ಯಾಕ್ಷರಾದ ಶಿಲ್ಪ, ರೇಣುಕಾದೇವಿ, ಉಪ ಸಮಿತಿಯ ಉಪಾಧ್ಯಕ್ಷರುಗಳಾದ ಪ್ರಸಾದ್ ನಾಡನಹಳ್ಳಿ , ನಂಜುoಡಸ್ವಾಮಿ, ಕೆ.ಜಿ. ದೇವರಾಜ್, ಮಹೇಶ್ ಮತ್ತಿತ್ತರು ಉಪಸ್ಥಿತರಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…