ಮೈಸೂರು

ಯೋಗವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ : ಶಾಸಕ ಶ್ರೀವತ್ಸ

ಮೈಸೂರು : ಯೋಗವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ ಎಂದು ಶಾಸಕ ಶ್ರೀವತ್ಸ ಹೇಳಿದರು.

ನಗರದ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದಲ್ಲಿರುವ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೇ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಕ್ಷಿಣ ಭಾರತದ ಕರ್ನಾಟಕ ರಾಜ್ಯದಲ್ಲಿರುವ ಮೈಸೂರು ವಿಶ್ವ ರಾಜಧಾನಿ ಎಂದು ಗುರುತಿಸಲ್ಪಟ್ಟಿದೆ. ರಾಜಮನೆತನದ ಗತಕಾಲವನ್ನು ಹೊಂದಿರುವ ಮೈಸೂರು ನಗರವು ಯೋಗ ಅಭ್ಯಾಸವನ್ನು ಮಾಡಲು ಬರುವ ಯೋಗ ಆಸಕ್ತರಿಗೆ ಜನಪ್ರಿಯ ತಾಣವಾಗಿದೆ. ಯೋಗವನ್ನು ನಾನು ಅಭ್ಯಾಸ ವಾಡುತ್ತಿದ್ದೇನೆ ಮುಂದಿನ ದಸರಾದಲ್ಲಿ ಯೋಗ ಪ್ರದರ್ಶನ ಮಾಡಲು ಪ್ರಶಂಸುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಯೋಗ ದಸರ ಉಪ ಸಮಿತಿಯ ಅಧ್ಯಕ್ಷರಾದ ಎನ್.ನಾಗೇಶ್ ಮಾತನಾಡಿ, ದಸರಾ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ 2000 ಸ್ಪರ್ಧಾರ್ಥಿಗಳು ಭಾಗವಹಿಸಿದ್ದಾರೆ. ಯೋಗ ಮಾಡುವುದು ದೇಹದ ಕಸರತ್ತಿಗಲ್ಲ ಇದು ವಾನಸಿಕ ನೆಮ್ಮದಿ ಹಾಗೂ ಏಕಾಗ್ರತೆ , ಮನಸ್ಸಿಗೆ ಶಾಂತಿಯನ್ನು ನೀಡುತ್ತದೆ. ಯೋಗ ದಸರಾ ಸ್ಫರ್ಧೆ ಕೇವಲ ಸ್ಫರ್ಧೆಯಾಗಿರುವುದಿಲ್ಲ ಉತ್ತಮ ಆರೋಗ್ಯ ತಮತೋಲನ ಕಾಪಾಡಿಕೊಳ್ಳುವ ಸಂದೇಶವನ್ನು ಸಾರುತ್ತದೆ ಎಂದರು.

ಇದನ್ನು ಓದಿ : ದಸರಾ ಸಂಭ್ರಮಕ್ಕೆ ಹೊಸ ಮೆರಗು : ಸೆ.28,29 ರಂದು ಆಕರ್ಷಕ ಡ್ರೋನ್‌ ಪ್ರಾಯೋಗಿಕ ಪ್ರದರ್ಶನ

ಮುಂದಿನ ತಲೆವಾರುಗಳಿಗೆ ಯೋಗದ ಬಗ್ಗೆ ಅರಿವು ಮೂಡಿಸಬೇಕು ಹಾಗೂ ಎಲ್ಲರೂ ಯೋಗ ಮಾಡುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.

ಸ್ಫರ್ಧೆಯಲ್ಲಿ 10 ರಿಂದ 12 ವರ್ಷದ ವಯೋಮಿತಿಯಲ್ಲಿ 385 ಸ್ಪರ್ಧಿಗಳು, 12 ರಿಂದ 14 ವರ್ಷದ ವಯೋಮಿತಿಯಲ್ಲಿ 361 ಸ್ಪರ್ಧಿಗಳು, 14 ರಿಂದ 18 ವರ್ಷದ ವಯೋಮಿತಿಯಲ್ಲಿ 219 ಸ್ಪರ್ಧಿಗಳು, 21 ರಿಂದ ವರ್ಷದ ವಯೋಮಿತಿಯಲ್ಲಿ 94 ಸ್ಪರ್ಧಿಗಳು, 35 ರಿಂದ 45 ವರ್ಷದ ವಯೋಮಿತಿಯಲ್ಲಿ 138 ಸ್ಪರ್ಧಿಗಳು, 45 ರಿಂದ 50 ವರ್ಷದ ವಯೋಮಿತಿಯಲ್ಲಿ 106 ಸ್ಪರ್ಧಿಗಳು, 55 ರಿಂದ 65 ವರ್ಷದ ವಯೋಮಿತಿಯಲ್ಲಿ 49 ಸ್ಪರ್ಧಿಗಳು, 65 ವರ್ಷ ಮೇಲ್ಪಟ್ಟವರು 42 ಸ್ಪರ್ಧಿಗಳು, ವಿಶೇಷ ಚೇತನ ವಿಭಾಗದಲ್ಲಿ 27 ಸ್ಪರ್ಧಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಮಿತಿಯ ಉಪವಿಶೇಷ ಅಧಿಕಾರಿ ಕೆ.ರವ್ಯಾ, ಸಮಿತಿಯ ಕಾರ್ಯಧ್ಯಾಕ್ಷರಾದ ನಿರೂಪ್ ವೆಸ್ಲಿ, ಸಹ ಕಾರ್ಯಧ್ಯಾಕ್ಷರಾದ ಶಿಲ್ಪ, ರೇಣುಕಾದೇವಿ, ಉಪ ಸಮಿತಿಯ ಉಪಾಧ್ಯಕ್ಷರುಗಳಾದ ಪ್ರಸಾದ್ ನಾಡನಹಳ್ಳಿ , ನಂಜುoಡಸ್ವಾಮಿ, ಕೆ.ಜಿ. ದೇವರಾಜ್, ಮಹೇಶ್ ಮತ್ತಿತ್ತರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

2 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

2 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

3 hours ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

4 hours ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

5 hours ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

6 hours ago