ಮೈಸೂರು

ಮೈಸೂರು | ಧಮ್ಮದೀಪ ; ಧಮ್ಮೋಪದೇಶ ನೀಡಿದ ಭಂತೆ ಕಲ್ಯಾಣಸಿರಿ

ಮೈಸೂರು: ಇಲವಾಲದ ಸಮೃದ್ಧಿ ಬಡಾವಣೆಯಲ್ಲಿ ಬೌದ್ಧ ಉಪಾಸಕರಾದ ಕೆ.ಎಂ.ವಿನೋದ ಮತ್ತು ಎಚ್.ಸಿ.ರಾಜೇಶ್ ಅವರ ನಿವೇಶನದಲ್ಲಿ ಧಮ್ಮದೀಪ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು.

ಅಶೋಕಪುರಂನ ಬೌದ್ಧವಿಹಾರದ ಭಂತೆ ಡಾ.ಕಲ್ಯಾಣಸಿರಿ ಅವರ ಸಾನಿಧ್ಯದಲ್ಲಿ ಬುದ್ಧವಂದನೆಯೊಂದಿಗೆ ಧಮ್ಮೋಪದೇಶ ನಡೆಯಿತು.

ಬಳಿಕ ಮಾತನಾಡಿದವ ಭಂತೇಜಿ ಕಲ್ಯಾಣಿಸಿರಿ ಅವರು, ಬುದ್ಧತತ್ವ ಮಾನವತ್ವದ ಪ್ರತಿರೂಪವಾಗಿದ್ದು ಲೋಕದ ಜೀವರಾಶಿಗಳ ಹಿತ ಮತ್ತು ಸುಖಕ್ಕಾಗಿ ಹಾತೊರೆಯುತ್ತದೆ. ಜಾತಿಕೊಳಕುಗಳಿಂದ ಮತಿಗೆಟ್ಟ ಸಮಾಜದಲ್ಲಿ ಜೀವಜೀವಗಳ ನಡುವೆ ಸಮತೆ, ಮಮತೆಯ ಸಂಪ್ರೀತಿ ಹರಿಸಿ ಸರ್ವರೂ ಸಾಮರಸ್ಯದಿಂದ ಬದುಕುವ ನೈತಿಕ ಸಂಸ್ಕಾರವನ್ನು ಕಲಿಸುತ್ತದೆ ಎಂದು ಹೇಳಿದರು.

ಕಣ್ಣಿಗೆ ಕಾಣದ ಸ್ವರ್ಗ-ನರಕಗಳ ಚಿಂತೆಯಲ್ಲಿ ಮೌಡ್ಯಾಲೋಚನೆಗಳಿಗೆ ತುತ್ತಾಗಿರುವ ಮಾನವನಿಗೆ ತಮ್ಮ ನಡತೆಯಿಂದ ಸನ್ಮಾರ್ಗವನ್ನೂ ಸಾಧಿಸಬಹುದು ಎಂದು ಬುದ್ಧರು ತೋರಿಸಿದ್ದಾರೆ. ಹೀಗಾಗಿ ಪಂಚಶೀಲ, ಅಷ್ಟಾಂಗಮಾರ್ಗ ಮತ್ತು ದಶಪಾರಮಿಗಳನ್ನು ಅನುಸರಿಸುವುದರ ಮುಲಕ ಭೂವಾಸಿಗಳಾದ ನಾವು ಇಲ್ಲಿಯೇ ಈ ಜೀವನದಲ್ಲಿಯೇ ಸ್ವರ್ಗಸುಖವನ್ನು ಅನುಭವಿಸಬಹುದಾಗಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಕಾಳಮ್ಮ, ಪಾರ್ವತಮ್ಮ, ಚಿಕ್ಕದಾಸಯ್ಯ, ಮಾಯಣ್ಣ, ಎಚ್.ಆರ್.ಯಶಿಕ, ಎಚ್.ಆರ್.ಪ್ರಬುದ್ಧ ಸಾತ್ವಿಕ್, ಗೋವಿಂದರಾಜ್, ರಮೇಶ್, ಕೆ.ಲೋಕೇಶ್, ನಟೇಶ್, ಲೇಖಕಿ ಸುಮ ಪಂಚವಳ್ಳಿ, ಎಂ.ಎಸ್.ಮಂಜು, ಪೋಲಿಸ್ ಇಲಾಖೆಯ ವಸಂತಕುಮಾರ್, ಜ್ಯೋತಿಷ್ ಮೂರ್ತಿ, ಸೋಯಬ್ ರಜಾಕ್, ಲೋಕೇಶ್ ಎಂ. ಮೊದಲಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

1 hour ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

1 hour ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

2 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

2 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

2 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

2 hours ago