ಮೈಸೂರು

ಮೈಸೂರು | ಧಮ್ಮದೀಪ ; ಧಮ್ಮೋಪದೇಶ ನೀಡಿದ ಭಂತೆ ಕಲ್ಯಾಣಸಿರಿ

ಮೈಸೂರು: ಇಲವಾಲದ ಸಮೃದ್ಧಿ ಬಡಾವಣೆಯಲ್ಲಿ ಬೌದ್ಧ ಉಪಾಸಕರಾದ ಕೆ.ಎಂ.ವಿನೋದ ಮತ್ತು ಎಚ್.ಸಿ.ರಾಜೇಶ್ ಅವರ ನಿವೇಶನದಲ್ಲಿ ಧಮ್ಮದೀಪ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು.

ಅಶೋಕಪುರಂನ ಬೌದ್ಧವಿಹಾರದ ಭಂತೆ ಡಾ.ಕಲ್ಯಾಣಸಿರಿ ಅವರ ಸಾನಿಧ್ಯದಲ್ಲಿ ಬುದ್ಧವಂದನೆಯೊಂದಿಗೆ ಧಮ್ಮೋಪದೇಶ ನಡೆಯಿತು.

ಬಳಿಕ ಮಾತನಾಡಿದವ ಭಂತೇಜಿ ಕಲ್ಯಾಣಿಸಿರಿ ಅವರು, ಬುದ್ಧತತ್ವ ಮಾನವತ್ವದ ಪ್ರತಿರೂಪವಾಗಿದ್ದು ಲೋಕದ ಜೀವರಾಶಿಗಳ ಹಿತ ಮತ್ತು ಸುಖಕ್ಕಾಗಿ ಹಾತೊರೆಯುತ್ತದೆ. ಜಾತಿಕೊಳಕುಗಳಿಂದ ಮತಿಗೆಟ್ಟ ಸಮಾಜದಲ್ಲಿ ಜೀವಜೀವಗಳ ನಡುವೆ ಸಮತೆ, ಮಮತೆಯ ಸಂಪ್ರೀತಿ ಹರಿಸಿ ಸರ್ವರೂ ಸಾಮರಸ್ಯದಿಂದ ಬದುಕುವ ನೈತಿಕ ಸಂಸ್ಕಾರವನ್ನು ಕಲಿಸುತ್ತದೆ ಎಂದು ಹೇಳಿದರು.

ಕಣ್ಣಿಗೆ ಕಾಣದ ಸ್ವರ್ಗ-ನರಕಗಳ ಚಿಂತೆಯಲ್ಲಿ ಮೌಡ್ಯಾಲೋಚನೆಗಳಿಗೆ ತುತ್ತಾಗಿರುವ ಮಾನವನಿಗೆ ತಮ್ಮ ನಡತೆಯಿಂದ ಸನ್ಮಾರ್ಗವನ್ನೂ ಸಾಧಿಸಬಹುದು ಎಂದು ಬುದ್ಧರು ತೋರಿಸಿದ್ದಾರೆ. ಹೀಗಾಗಿ ಪಂಚಶೀಲ, ಅಷ್ಟಾಂಗಮಾರ್ಗ ಮತ್ತು ದಶಪಾರಮಿಗಳನ್ನು ಅನುಸರಿಸುವುದರ ಮುಲಕ ಭೂವಾಸಿಗಳಾದ ನಾವು ಇಲ್ಲಿಯೇ ಈ ಜೀವನದಲ್ಲಿಯೇ ಸ್ವರ್ಗಸುಖವನ್ನು ಅನುಭವಿಸಬಹುದಾಗಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಕಾಳಮ್ಮ, ಪಾರ್ವತಮ್ಮ, ಚಿಕ್ಕದಾಸಯ್ಯ, ಮಾಯಣ್ಣ, ಎಚ್.ಆರ್.ಯಶಿಕ, ಎಚ್.ಆರ್.ಪ್ರಬುದ್ಧ ಸಾತ್ವಿಕ್, ಗೋವಿಂದರಾಜ್, ರಮೇಶ್, ಕೆ.ಲೋಕೇಶ್, ನಟೇಶ್, ಲೇಖಕಿ ಸುಮ ಪಂಚವಳ್ಳಿ, ಎಂ.ಎಸ್.ಮಂಜು, ಪೋಲಿಸ್ ಇಲಾಖೆಯ ವಸಂತಕುಮಾರ್, ಜ್ಯೋತಿಷ್ ಮೂರ್ತಿ, ಸೋಯಬ್ ರಜಾಕ್, ಲೋಕೇಶ್ ಎಂ. ಮೊದಲಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿತ್ರದುರ್ಗ ಬಸ್‌ ದುರಂತ | ಶಾಲಾ ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಬೆಂಕಿ : ಕೂದಲೆಳೆ ಅಂತರದಲ್ಲಿ ಪವಾಡಸದೃಶ ಪಾರು!

ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…

6 mins ago

ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…

59 mins ago

ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್‌.27ರಂದು ದೆಹಲಿಯ ಇಂದಿರಾ…

1 hour ago

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…

2 hours ago

ರಾಜ್ಯದಲ್ಲಿ ಬೆಳಗಿನ ವೇಳೆ ದಟ್ಟ ಮಂಜು: ಹವಾಮಾನ ತಜ್ಞರು ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…

2 hours ago

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಿಷ್ಟು.!

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್‌…

3 hours ago