ಮೈಸೂರು: ಇಲವಾಲದ ಸಮೃದ್ಧಿ ಬಡಾವಣೆಯಲ್ಲಿ ಬೌದ್ಧ ಉಪಾಸಕರಾದ ಕೆ.ಎಂ.ವಿನೋದ ಮತ್ತು ಎಚ್.ಸಿ.ರಾಜೇಶ್ ಅವರ ನಿವೇಶನದಲ್ಲಿ ಧಮ್ಮದೀಪ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು.
ಅಶೋಕಪುರಂನ ಬೌದ್ಧವಿಹಾರದ ಭಂತೆ ಡಾ.ಕಲ್ಯಾಣಸಿರಿ ಅವರ ಸಾನಿಧ್ಯದಲ್ಲಿ ಬುದ್ಧವಂದನೆಯೊಂದಿಗೆ ಧಮ್ಮೋಪದೇಶ ನಡೆಯಿತು.
ಬಳಿಕ ಮಾತನಾಡಿದವ ಭಂತೇಜಿ ಕಲ್ಯಾಣಿಸಿರಿ ಅವರು, ಬುದ್ಧತತ್ವ ಮಾನವತ್ವದ ಪ್ರತಿರೂಪವಾಗಿದ್ದು ಲೋಕದ ಜೀವರಾಶಿಗಳ ಹಿತ ಮತ್ತು ಸುಖಕ್ಕಾಗಿ ಹಾತೊರೆಯುತ್ತದೆ. ಜಾತಿಕೊಳಕುಗಳಿಂದ ಮತಿಗೆಟ್ಟ ಸಮಾಜದಲ್ಲಿ ಜೀವಜೀವಗಳ ನಡುವೆ ಸಮತೆ, ಮಮತೆಯ ಸಂಪ್ರೀತಿ ಹರಿಸಿ ಸರ್ವರೂ ಸಾಮರಸ್ಯದಿಂದ ಬದುಕುವ ನೈತಿಕ ಸಂಸ್ಕಾರವನ್ನು ಕಲಿಸುತ್ತದೆ ಎಂದು ಹೇಳಿದರು.
ಕಣ್ಣಿಗೆ ಕಾಣದ ಸ್ವರ್ಗ-ನರಕಗಳ ಚಿಂತೆಯಲ್ಲಿ ಮೌಡ್ಯಾಲೋಚನೆಗಳಿಗೆ ತುತ್ತಾಗಿರುವ ಮಾನವನಿಗೆ ತಮ್ಮ ನಡತೆಯಿಂದ ಸನ್ಮಾರ್ಗವನ್ನೂ ಸಾಧಿಸಬಹುದು ಎಂದು ಬುದ್ಧರು ತೋರಿಸಿದ್ದಾರೆ. ಹೀಗಾಗಿ ಪಂಚಶೀಲ, ಅಷ್ಟಾಂಗಮಾರ್ಗ ಮತ್ತು ದಶಪಾರಮಿಗಳನ್ನು ಅನುಸರಿಸುವುದರ ಮುಲಕ ಭೂವಾಸಿಗಳಾದ ನಾವು ಇಲ್ಲಿಯೇ ಈ ಜೀವನದಲ್ಲಿಯೇ ಸ್ವರ್ಗಸುಖವನ್ನು ಅನುಭವಿಸಬಹುದಾಗಿದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಕಾಳಮ್ಮ, ಪಾರ್ವತಮ್ಮ, ಚಿಕ್ಕದಾಸಯ್ಯ, ಮಾಯಣ್ಣ, ಎಚ್.ಆರ್.ಯಶಿಕ, ಎಚ್.ಆರ್.ಪ್ರಬುದ್ಧ ಸಾತ್ವಿಕ್, ಗೋವಿಂದರಾಜ್, ರಮೇಶ್, ಕೆ.ಲೋಕೇಶ್, ನಟೇಶ್, ಲೇಖಕಿ ಸುಮ ಪಂಚವಳ್ಳಿ, ಎಂ.ಎಸ್.ಮಂಜು, ಪೋಲಿಸ್ ಇಲಾಖೆಯ ವಸಂತಕುಮಾರ್, ಜ್ಯೋತಿಷ್ ಮೂರ್ತಿ, ಸೋಯಬ್ ರಜಾಕ್, ಲೋಕೇಶ್ ಎಂ. ಮೊದಲಾದವರು ಉಪಸ್ಥಿತರಿದ್ದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…