ಮೈಸೂರು

ಮೈಸೂರು | ಧಮ್ಮದೀಪ ; ಧಮ್ಮೋಪದೇಶ ನೀಡಿದ ಭಂತೆ ಕಲ್ಯಾಣಸಿರಿ

ಮೈಸೂರು: ಇಲವಾಲದ ಸಮೃದ್ಧಿ ಬಡಾವಣೆಯಲ್ಲಿ ಬೌದ್ಧ ಉಪಾಸಕರಾದ ಕೆ.ಎಂ.ವಿನೋದ ಮತ್ತು ಎಚ್.ಸಿ.ರಾಜೇಶ್ ಅವರ ನಿವೇಶನದಲ್ಲಿ ಧಮ್ಮದೀಪ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು.

ಅಶೋಕಪುರಂನ ಬೌದ್ಧವಿಹಾರದ ಭಂತೆ ಡಾ.ಕಲ್ಯಾಣಸಿರಿ ಅವರ ಸಾನಿಧ್ಯದಲ್ಲಿ ಬುದ್ಧವಂದನೆಯೊಂದಿಗೆ ಧಮ್ಮೋಪದೇಶ ನಡೆಯಿತು.

ಬಳಿಕ ಮಾತನಾಡಿದವ ಭಂತೇಜಿ ಕಲ್ಯಾಣಿಸಿರಿ ಅವರು, ಬುದ್ಧತತ್ವ ಮಾನವತ್ವದ ಪ್ರತಿರೂಪವಾಗಿದ್ದು ಲೋಕದ ಜೀವರಾಶಿಗಳ ಹಿತ ಮತ್ತು ಸುಖಕ್ಕಾಗಿ ಹಾತೊರೆಯುತ್ತದೆ. ಜಾತಿಕೊಳಕುಗಳಿಂದ ಮತಿಗೆಟ್ಟ ಸಮಾಜದಲ್ಲಿ ಜೀವಜೀವಗಳ ನಡುವೆ ಸಮತೆ, ಮಮತೆಯ ಸಂಪ್ರೀತಿ ಹರಿಸಿ ಸರ್ವರೂ ಸಾಮರಸ್ಯದಿಂದ ಬದುಕುವ ನೈತಿಕ ಸಂಸ್ಕಾರವನ್ನು ಕಲಿಸುತ್ತದೆ ಎಂದು ಹೇಳಿದರು.

ಕಣ್ಣಿಗೆ ಕಾಣದ ಸ್ವರ್ಗ-ನರಕಗಳ ಚಿಂತೆಯಲ್ಲಿ ಮೌಡ್ಯಾಲೋಚನೆಗಳಿಗೆ ತುತ್ತಾಗಿರುವ ಮಾನವನಿಗೆ ತಮ್ಮ ನಡತೆಯಿಂದ ಸನ್ಮಾರ್ಗವನ್ನೂ ಸಾಧಿಸಬಹುದು ಎಂದು ಬುದ್ಧರು ತೋರಿಸಿದ್ದಾರೆ. ಹೀಗಾಗಿ ಪಂಚಶೀಲ, ಅಷ್ಟಾಂಗಮಾರ್ಗ ಮತ್ತು ದಶಪಾರಮಿಗಳನ್ನು ಅನುಸರಿಸುವುದರ ಮುಲಕ ಭೂವಾಸಿಗಳಾದ ನಾವು ಇಲ್ಲಿಯೇ ಈ ಜೀವನದಲ್ಲಿಯೇ ಸ್ವರ್ಗಸುಖವನ್ನು ಅನುಭವಿಸಬಹುದಾಗಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಕಾಳಮ್ಮ, ಪಾರ್ವತಮ್ಮ, ಚಿಕ್ಕದಾಸಯ್ಯ, ಮಾಯಣ್ಣ, ಎಚ್.ಆರ್.ಯಶಿಕ, ಎಚ್.ಆರ್.ಪ್ರಬುದ್ಧ ಸಾತ್ವಿಕ್, ಗೋವಿಂದರಾಜ್, ರಮೇಶ್, ಕೆ.ಲೋಕೇಶ್, ನಟೇಶ್, ಲೇಖಕಿ ಸುಮ ಪಂಚವಳ್ಳಿ, ಎಂ.ಎಸ್.ಮಂಜು, ಪೋಲಿಸ್ ಇಲಾಖೆಯ ವಸಂತಕುಮಾರ್, ಜ್ಯೋತಿಷ್ ಮೂರ್ತಿ, ಸೋಯಬ್ ರಜಾಕ್, ಲೋಕೇಶ್ ಎಂ. ಮೊದಲಾದವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅರಣ್ಯ ಸಿಬ್ಬಂದಿಗೆ ಇಲಾಖೆಯಿಂದ ಬೇಕಿದೆ ಪ್ರೋತ್ಸಾಹ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…

4 mins ago

ಹನೂರು | ಉಡುತೊರೆಹಳ್ಳ ಜಲಾಶಯದ ಹೂಳು ತೆಗೆಯದೆ ಸಮಸ್ಯೆ

ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…

11 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 26 ಶನಿವಾರ

22 mins ago

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…

1 hour ago

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

10 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

13 hours ago