ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಮೈಸೂರು ಜಿಲ್ಲಾಡಳಿತ ಮುಂದಾಗಿದೆ.
ವರುಣ ಕ್ಷೇತ್ರದ ಗುಡುಮಾದನಗಳ್ಳಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ಕಾಮಗಾರಿ ಪ್ರಾರಂಭವಾಗಿದ್ದು, ಜೆಸಿಬಿ ಮೂಲಕ ಕೃಷಿ ಭೂಮಿ ಅಗೆಯುವ ಕಾರ್ಯ ನಡೆಯುತ್ತಿದೆ.
ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್ ನಿರ್ಮಾಣಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ಸ್ಥಳದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ರೈತರು ಸುಮಾರು 30-40 ವರ್ಷಗಳಿಂದ ಕೃಷಿ ಮಾಡುತ್ತಿದ್ದು, ಕೃಷಿ ಭೂಮಿ ಬೇಡ ಬೇರೆಡೆ ನಿರ್ಮಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆದರೂ ರೈತರ ವಿರೋಧದ ನಡುವೆಯೂ ಕಾಮಗಾರಿ ಆರಂಭವಾಗಿದ್ದು, ರೈತರು ಸಿಎಂ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ.
ಇನ್ನು ಇತ್ತ ಕೆಸರು ಗದ್ದೆಯಲ್ಲಿ ಜೆಸಿಬಿ ಮುಳುಗಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ.





