ಮೈಸೂರು: ಮೈಸೂರಿನಲ್ಲೂ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಭಾರೀ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇವೆ. ಡೆಂಗ್ಯೂ ಪ್ರಕರಣಗಳ ಬಗ್ಗೆ ಜನತೆಗೆ ಎಚ್ಚರಿಕೆ ನೀಡಿದರೂ ಕೂಡ ಯಾರೂ ಮುಂಜಾಗ್ರತಾ ಕ್ರಮ ಪಾಲಿಸುತ್ತಿಲ್ಲ. ಈ ಬೆನ್ನಲ್ಲೇ ಮೈಸೂರಿನಲ್ಲೂ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, 358 ಮಂದಿಗೆ ಡೆಂಗ್ಯೂ ಪಾಸಿಟಿವ್ ದೃಢಗೊಂಡಿದೆ.
ತಲೆನೋವು, ಸ್ನಾಯು, ಮೂಳೆ ಅಥವಾ ಕೀಲುನೋವು, ವಾಕರಿಕೆ, ವಾಂತಿ, ಕಣ್ಣುಗಳ ಹಿಂದೆ ನೋವು, ಊದಿಕೊಂಡ ಗ್ರಂಥಿಗಳು ಮತ್ತು ಚರ್ಮದ ಮೇಲೆ ದದ್ದುಗಳ ಜೊತೆಗೆ ನಿಮಗೆ ಜ್ವರವಿದ್ದರೆ ಯಾರೂ ಕೂಡ ನಿರ್ಲಕ್ಷಿಸಬೇಡಿ. ಈ ರೋಗ ಲಕ್ಷಣಗಳಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದು ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡಿದೆ.
ಡೆಂಗ್ಯೂ, ಇದು ಈಡಿಸ್ ಈಜಿಪ್ಟಿ ಸೊಳ್ಳೆ ಕಚ್ಚುವಿಕೆಯಿಂದ ಉಂಟಾಗುತ್ತದೆ. ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿವೆ.
ಮೈಸೂರು ಜಿಲ್ಲೆಯಲ್ಲಿ 2024ರ ಜನವರಿಯಿಂದ ಜೂನ್ವರೆಗೆ 2395 ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 358 ಮಾದರಿಗಳು ಪಾಸಿಟಿವ್ ಎಂದು ದೃಢಪಟ್ಟಿದೆ.
ಇನ್ನೂ ಮೈಸೂರು ನಗರದಲ್ಲಿ 743 ಜನರ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 146 ಮಂದಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದೆ. ಮೈಸೂರು ಗ್ರಾಮಾಂತರದಲ್ಲಿ 272 ಜನರಿಗೆ ಪರೀಕ್ಷೆ ಮಾಡಲಾಗಿದ್ದು, 47 ಪಾಸಿಟಿವ್ ದೃಢಪಟ್ಟಿದೆ.
ಇನ್ನೂ ಟಿ.ನರಸೀಪುರ ತಾಲ್ಲೂಕಿನಲ್ಲಿ 106 ಮಾದರಿಗಳನ್ನು ಒಳಪಡಿಸಲಾಗಿದ್ದು, ಆರು ಮಾದರಿಗಳು ಪಾಸಿಟಿವ್ ಎಂದು ದೃಢಪಟ್ಟಿದೆ. ನಂಜನಗೂಡು ತಾಲ್ಲೂಕಿನಲ್ಲಿ 173 ಮಾದರಿ ಪರೀಕ್ಷೆ ಮಾಡಲಾಗಿದ್ದು, 18 ಪಾಸಿಟಿವ್ ದೃಢಪಟ್ಟಿದೆ. ಹೆಚ್.ಡಿ.ಕೋಟೆಯಲ್ಲಿ 14 ಮಂದಿಗೆ ಪಾಸಿಟಿವ್ ದೃಢಗೊಂಡಿದ್ದು, ಹುಣಸೂರಿನಲ್ಲಿ 72 ಮಂದಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ.
ಪಿರಿಯಾಪಟ್ಟಣದಲ್ಲಿ 29 ಮಂದಿಗೆ ಪಾಸಿಟಿವ್ ಬಂದಿದ್ದು, ಕೆ.ಆರ್.ನಗರ ತಾಲ್ಲೂಕಿನಲ್ಲಿ 22 ಮಂದಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದೆ.
ಡೆಂಗ್ಯೂ ಪ್ರಕರಣಗಳು ಹೆಚ್ಚಾಗದಂತೆ ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡುತ್ತಿದ್ದು, ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ನೀರಿನ ತೊಟ್ಟಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಖಾಲಿ ತೆಂಗಿನ ಚಿಪ್ಪುಗಳು ಮತ್ತು ಬಾಟಲಿಯ ಮುಚ್ಚಳಗಳನ್ನು ಸರಿಯಾದ ರೀತಿಯಲ್ಲಿ ಬಿಸಾಡಬೇಕು ಇದರಿಂದ ನೀರು ನಿಲ್ಲುವುದಿಲ್ಲ .
ಈಡಿಸ್ ಈಜಿಪ್ಟಿ ಸೊಳ್ಳೆಗಳು ಸಾಮಾನ್ಯವಾಗಿ ಬೆಳಿಗ್ಗೆ ಮತ್ತು ಸಂಜೆಯ ಸಮಯದಲ್ಲಿ ಸಕ್ರಿಯವಾಗಿರುತ್ತವೆ. ಡೆಂಗ್ಯೂಗೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲದಿದ್ದರೂ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದೆ.
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…
ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…
ಬೆಂಗಳೂರು : ಬೀದರ್ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…
ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…
ನಂಜನಗೂಡು : ಮಾರ್ಚ್ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ…