ಮೈಸೂರು: ಮೈಸೂರಿನಲ್ಲೂ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಭಾರೀ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇವೆ. ಡೆಂಗ್ಯೂ ಪ್ರಕರಣಗಳ ಬಗ್ಗೆ ಜನತೆಗೆ ಎಚ್ಚರಿಕೆ ನೀಡಿದರೂ ಕೂಡ ಯಾರೂ ಮುಂಜಾಗ್ರತಾ ಕ್ರಮ ಪಾಲಿಸುತ್ತಿಲ್ಲ. ಈ ಬೆನ್ನಲ್ಲೇ ಮೈಸೂರಿನಲ್ಲೂ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, 358 ಮಂದಿಗೆ ಡೆಂಗ್ಯೂ ಪಾಸಿಟಿವ್ ದೃಢಗೊಂಡಿದೆ.
ತಲೆನೋವು, ಸ್ನಾಯು, ಮೂಳೆ ಅಥವಾ ಕೀಲುನೋವು, ವಾಕರಿಕೆ, ವಾಂತಿ, ಕಣ್ಣುಗಳ ಹಿಂದೆ ನೋವು, ಊದಿಕೊಂಡ ಗ್ರಂಥಿಗಳು ಮತ್ತು ಚರ್ಮದ ಮೇಲೆ ದದ್ದುಗಳ ಜೊತೆಗೆ ನಿಮಗೆ ಜ್ವರವಿದ್ದರೆ ಯಾರೂ ಕೂಡ ನಿರ್ಲಕ್ಷಿಸಬೇಡಿ. ಈ ರೋಗ ಲಕ್ಷಣಗಳಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದು ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡಿದೆ.
ಡೆಂಗ್ಯೂ, ಇದು ಈಡಿಸ್ ಈಜಿಪ್ಟಿ ಸೊಳ್ಳೆ ಕಚ್ಚುವಿಕೆಯಿಂದ ಉಂಟಾಗುತ್ತದೆ. ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿವೆ.
ಮೈಸೂರು ಜಿಲ್ಲೆಯಲ್ಲಿ 2024ರ ಜನವರಿಯಿಂದ ಜೂನ್ವರೆಗೆ 2395 ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 358 ಮಾದರಿಗಳು ಪಾಸಿಟಿವ್ ಎಂದು ದೃಢಪಟ್ಟಿದೆ.
ಇನ್ನೂ ಮೈಸೂರು ನಗರದಲ್ಲಿ 743 ಜನರ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 146 ಮಂದಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದೆ. ಮೈಸೂರು ಗ್ರಾಮಾಂತರದಲ್ಲಿ 272 ಜನರಿಗೆ ಪರೀಕ್ಷೆ ಮಾಡಲಾಗಿದ್ದು, 47 ಪಾಸಿಟಿವ್ ದೃಢಪಟ್ಟಿದೆ.
ಇನ್ನೂ ಟಿ.ನರಸೀಪುರ ತಾಲ್ಲೂಕಿನಲ್ಲಿ 106 ಮಾದರಿಗಳನ್ನು ಒಳಪಡಿಸಲಾಗಿದ್ದು, ಆರು ಮಾದರಿಗಳು ಪಾಸಿಟಿವ್ ಎಂದು ದೃಢಪಟ್ಟಿದೆ. ನಂಜನಗೂಡು ತಾಲ್ಲೂಕಿನಲ್ಲಿ 173 ಮಾದರಿ ಪರೀಕ್ಷೆ ಮಾಡಲಾಗಿದ್ದು, 18 ಪಾಸಿಟಿವ್ ದೃಢಪಟ್ಟಿದೆ. ಹೆಚ್.ಡಿ.ಕೋಟೆಯಲ್ಲಿ 14 ಮಂದಿಗೆ ಪಾಸಿಟಿವ್ ದೃಢಗೊಂಡಿದ್ದು, ಹುಣಸೂರಿನಲ್ಲಿ 72 ಮಂದಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ.
ಪಿರಿಯಾಪಟ್ಟಣದಲ್ಲಿ 29 ಮಂದಿಗೆ ಪಾಸಿಟಿವ್ ಬಂದಿದ್ದು, ಕೆ.ಆರ್.ನಗರ ತಾಲ್ಲೂಕಿನಲ್ಲಿ 22 ಮಂದಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದೆ.
ಡೆಂಗ್ಯೂ ಪ್ರಕರಣಗಳು ಹೆಚ್ಚಾಗದಂತೆ ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡುತ್ತಿದ್ದು, ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ನೀರಿನ ತೊಟ್ಟಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಖಾಲಿ ತೆಂಗಿನ ಚಿಪ್ಪುಗಳು ಮತ್ತು ಬಾಟಲಿಯ ಮುಚ್ಚಳಗಳನ್ನು ಸರಿಯಾದ ರೀತಿಯಲ್ಲಿ ಬಿಸಾಡಬೇಕು ಇದರಿಂದ ನೀರು ನಿಲ್ಲುವುದಿಲ್ಲ .
ಈಡಿಸ್ ಈಜಿಪ್ಟಿ ಸೊಳ್ಳೆಗಳು ಸಾಮಾನ್ಯವಾಗಿ ಬೆಳಿಗ್ಗೆ ಮತ್ತು ಸಂಜೆಯ ಸಮಯದಲ್ಲಿ ಸಕ್ರಿಯವಾಗಿರುತ್ತವೆ. ಡೆಂಗ್ಯೂಗೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲದಿದ್ದರೂ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…