ಮೈಸೂರು

ಮೈಸೂರಿನಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳು: ಜನತೆಗೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ

ಮೈಸೂರು: ಮೈಸೂರಿನಲ್ಲೂ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಭಾರೀ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇವೆ. ಡೆಂಗ್ಯೂ ಪ್ರಕರಣಗಳ ಬಗ್ಗೆ ಜನತೆಗೆ ಎಚ್ಚರಿಕೆ ನೀಡಿದರೂ ಕೂಡ ಯಾರೂ ಮುಂಜಾಗ್ರತಾ ಕ್ರಮ ಪಾಲಿಸುತ್ತಿಲ್ಲ. ಈ ಬೆನ್ನಲ್ಲೇ ಮೈಸೂರಿನಲ್ಲೂ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು,  358 ಮಂದಿಗೆ ಡೆಂಗ್ಯೂ ಪಾಸಿಟಿವ್‌ ದೃಢಗೊಂಡಿದೆ.

ತಲೆನೋವು, ಸ್ನಾಯು, ಮೂಳೆ ಅಥವಾ ಕೀಲುನೋವು, ವಾಕರಿಕೆ, ವಾಂತಿ, ಕಣ್ಣುಗಳ ಹಿಂದೆ ನೋವು, ಊದಿಕೊಂಡ ಗ್ರಂಥಿಗಳು ಮತ್ತು ಚರ್ಮದ ಮೇಲೆ ದದ್ದುಗಳ ಜೊತೆಗೆ ನಿಮಗೆ  ಜ್ವರವಿದ್ದರೆ ಯಾರೂ ಕೂಡ ನಿರ್ಲಕ್ಷಿಸಬೇಡಿ. ಈ ರೋಗ ಲಕ್ಷಣಗಳಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದು ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡಿದೆ.

ಡೆಂಗ್ಯೂ, ಇದು ಈಡಿಸ್‌ ಈಜಿಪ್ಟಿ ಸೊಳ್ಳೆ ಕಚ್ಚುವಿಕೆಯಿಂದ ಉಂಟಾಗುತ್ತದೆ. ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿವೆ.

ಮೈಸೂರು ಜಿಲ್ಲೆಯಲ್ಲಿ 2024ರ ಜನವರಿಯಿಂದ ಜೂನ್‌ವರೆಗೆ 2395 ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 358 ಮಾದರಿಗಳು ಪಾಸಿಟಿವ್‌ ಎಂದು ದೃಢಪಟ್ಟಿದೆ.

ಇನ್ನೂ ಮೈಸೂರು ನಗರದಲ್ಲಿ 743 ಜನರ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 146 ಮಂದಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದೆ. ಮೈಸೂರು ಗ್ರಾಮಾಂತರದಲ್ಲಿ 272 ಜನರಿಗೆ ಪರೀಕ್ಷೆ ಮಾಡಲಾಗಿದ್ದು, 47 ಪಾಸಿಟಿವ್‌ ದೃಢಪಟ್ಟಿದೆ.

ಇನ್ನೂ ಟಿ.ನರಸೀಪುರ ತಾಲ್ಲೂಕಿನಲ್ಲಿ 106 ಮಾದರಿಗಳನ್ನು ಒಳಪಡಿಸಲಾಗಿದ್ದು, ಆರು ಮಾದರಿಗಳು ಪಾಸಿಟಿವ್‌ ಎಂದು ದೃಢಪಟ್ಟಿದೆ. ನಂಜನಗೂಡು ತಾಲ್ಲೂಕಿನಲ್ಲಿ 173 ಮಾದರಿ ಪರೀಕ್ಷೆ ಮಾಡಲಾಗಿದ್ದು, 18 ಪಾಸಿಟಿವ್‌ ದೃಢಪಟ್ಟಿದೆ. ಹೆಚ್.ಡಿ.ಕೋಟೆಯಲ್ಲಿ 14 ಮಂದಿಗೆ ಪಾಸಿಟಿವ್‌ ದೃಢಗೊಂಡಿದ್ದು, ಹುಣಸೂರಿನಲ್ಲಿ 72 ಮಂದಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ.

ಪಿರಿಯಾಪಟ್ಟಣದಲ್ಲಿ 29 ಮಂದಿಗೆ ಪಾಸಿಟಿವ್‌ ಬಂದಿದ್ದು, ಕೆ.ಆರ್.ನಗರ ತಾಲ್ಲೂಕಿನಲ್ಲಿ 22 ಮಂದಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದೆ.

ಡೆಂಗ್ಯೂ ಪ್ರಕರಣಗಳು ಹೆಚ್ಚಾಗದಂತೆ ಆರೋಗ್ಯ ಇಲಾಖೆ ಜನತೆಗೆ ಎಚ್ಚರಿಕೆ ನೀಡುತ್ತಿದ್ದು, ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ನೀರಿನ ತೊಟ್ಟಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಖಾಲಿ ತೆಂಗಿನ ಚಿಪ್ಪುಗಳು ಮತ್ತು ಬಾಟಲಿಯ ಮುಚ್ಚಳಗಳನ್ನು ಸರಿಯಾದ ರೀತಿಯಲ್ಲಿ ಬಿಸಾಡಬೇಕು ಇದರಿಂದ ನೀರು ನಿಲ್ಲುವುದಿಲ್ಲ .

ಈಡಿಸ್‌ ಈಜಿಪ್ಟಿ ಸೊಳ್ಳೆಗಳು ಸಾಮಾನ್ಯವಾಗಿ ಬೆಳಿಗ್ಗೆ ಮತ್ತು ಸಂಜೆಯ ಸಮಯದಲ್ಲಿ ಸಕ್ರಿಯವಾಗಿರುತ್ತವೆ. ಡೆಂಗ್ಯೂಗೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲದಿದ್ದರೂ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

2 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

2 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

2 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

3 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

4 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

4 hours ago