ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 41.31 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮೊಹಮ್ಮದ್ ರೋಷನ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮಾದಕ ವಸ್ತು ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇಟ್ಟಿದ್ದ ಪೊಲೀಸರು, ಫೆಬ್ರವರಿ 11ರಂದು 3.14 ಗ್ರಾಂ MDMA ವಶಪಡಿಸಿಕೊಂಡು ಎಂ. ಮೊಹಮ್ಮದ್ ಕರೀಂ ಮತ್ತು ನಿಷಾದ್ ಪಾಷ (ಎ2) ಅವರನ್ನು ಬಂಧಿಸಿದ್ದರು. ಆ ಪ್ರಕರಣದಲ್ಲಿ (ಮೊ.ಸಂ 31/2026, ಕಲಂ 22(ಬಿ) ಎನ್ಡಿಪಿಎಸ್ ಕಾಯ್ದೆ) ದಾಖಲಾದ ತನಿಖೆಯನ್ನು ಮುಂದುವರಿಸಿ, ನಿಷಾದ್ ಪಾಷನಿಗೆ MDMA ಸರಬರಾಜು ಮಾಡುತ್ತಿದ್ದ ಮೊಹಮ್ಮದ್ ರೋಷನ್ ಅವರನ್ನು ಪತ್ತೆಹಚ್ಚಿ ಬಂಧಿಸಲಾಯಿತು.
ಬಂಧಿತ ಆರೋಪಿಯಿಂದ 41.31 ಗ್ರಾಂ MDMA (ಮೌಲ್ಯ ₹4 ಲಕ್ಷ) ವಶಪಡಿಸಿಕೊಳ್ಳಲಾಗಿದ್ದು, ತನಿಖೆಯಲ್ಲಿ ಆರೋಪಿ ಮೊಹಮ್ಮದ್ ರೋಷನ್ ಇನ್ಸ್ಟಾಗ್ರಾಂ ಮೂಲಕ ಬೆಂಗಳೂರಿನ ಅಪರಿಚಿತ ವ್ಯಕ್ತಿಯಿಂದ ಮಾದಕ ವಸ್ತುವನ್ನು ಪಡೆದು ಮೈಸೂರಿನಲ್ಲಿ ಮಾರಾಟ ಮಾಡುತ್ತಿದ್ದುದು ಬಹಿರಂಗವಾಗಿದೆ. ಈತನ ಮೇಲೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಹಿಂದೆಯೇ ಮೊ.ಸಂ 194/2024 (ಕಲಂ 22(ಸಿ) ಎನ್ಡಿಪಿಎಸ್) ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಮಂಡಿ ಠಾಣಾ ಇನ್ಸ್ಪೆಕ್ಟರ್ ದಿವಾಕರ್ ಆರ್., ಪಿಎಸ್ಐ ರಾಜು ಕೋನಕೇರಿ ಹಾಗೂ ಇತರ ಸಿಬ್ಬಂದಿ ಪಾಲ್ಗೊಂಡಿದ್ದರು. ಮೈಸೂರು ನಗರ ಪೊಲೀಸ್ ಆಯುಕ್ತರು ಮತ್ತು ಉಪ ಆಯುಕ್ತರು ಈ ಅಧಿಕಾರಿಗಳ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.
ಪೊಲೀಸರು ಉಳಿದ ಆರೋಪಿಗಳ ಪತ್ತೆಗೆ ಮತ್ತು ಮಾದಕ ವಸ್ತುಗಳ ಮೂಲಕ್ಕೆ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಮಾದಕವಸ್ತು ಮುಕ್ತ ನಗರ ನಿರ್ಮಾಣಕ್ಕಾಗಿ ಪೊಲೀಸ್ ಇಲಾಖೆಯು ನಿರಂತರ ಕಾರ್ಯಾಚರಣೆಗಳನ್ನು ಮುಂದುವರಿಸುತ್ತಿದೆ.
ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…
ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…