ಮೈಸೂರು : ವಿಶ್ವ ಪ್ರಸಿದ್ದ ಮೈಸೂರು ದಸರಾಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಅದ್ದೂರಿ ದಸರಾಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ, ಗಜಪಡೆಗಳ ತಲೀಮು ಕೂಡ ನಡೆಯುತ್ತಿದೆ. ಈ ಹಿನ್ನಲೆ ಇಂದು ಮೈಸೂರು ಅರಮನೆ ಮಂಡಳಿಯಲ್ಲಿ ಸಚಿವರಾದ ಶಿವರಾಜ್ ತಂಗಡಗಿ ಹಾಗೂ ಹೆಚ್.ಸಿ ಮಹದೇವಪ್ಪ ಅವರು ಮೈಸೂರು ದಸರಾ ಪೋಸ್ಟರ್ ಮತ್ತು ವೆಬ್ ಸೈಟ್ನ್ನು ಬಿಡುಗಡೆ ಮಾಡಿದರು.
ಇದೆ ವೇಳೆ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಈ ಬಾರಿ ಸಾಂಪ್ರದಾಯಿಕ ದಸರಾ ಮಾಡಲು ತೀರ್ಮಾನ ಮಾಡಿದ್ದೇವೆ. 190ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದೇವೆ. ಹಾಗಾಗಿ ಈ ಬಾರಿ ಸಾಂಪ್ರದಾಯಿಕ ದಸರಾ ಮಾಡುವುದಕ್ಕೆ ತೀರ್ಮಾನ ಮಾಡಿದ್ದು, ಅ.15ರಂದು ಹಂಸಲೇಖ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ.
ಕಳೆದ ದಸರಾಗಿಂತ ಈ ಬಾರಿ ಕಡಿಮೆ ವೆಚ್ಚದ ದಸರಾ ಆಚರಣೆ ಮಾಡುತ್ತೇವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಇದಕ್ಕೋಸ್ಕರ 15 ಕೋಟಿ ಹಣ ಬಿಡುಗಡೆಯಾಗಿದೆ. ಈ ಬಾರಿ ಯುವದಸರಾ, ಯುವ ಸಂಭ್ರಮ, ಏರ್ ಶೋ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಇರುತ್ತದೆ. ಜೊತೆಗೆ ಈ ಬಾರಿ ಹೆಚ್ಚು ಪ್ರಾಯೋಜಕತ್ವದ ಮೂಲಕ ದಸರಾ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…