ಮೈಸೂರು

ಮೈಸೂರು ದಸರಾ 2023 : ಪೋಸ್ಟರ್-ವೆಬ್‌ಸೈಟ್ ಬಿಡುಗಡೆ

ಮೈಸೂರು : ವಿಶ್ವ ಪ್ರಸಿದ್ದ ಮೈಸೂರು ದಸರಾಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಅದ್ದೂರಿ ದಸರಾಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ, ಗಜಪಡೆಗಳ ತಲೀಮು ಕೂಡ ನಡೆಯುತ್ತಿದೆ. ಈ ಹಿನ್ನಲೆ ಇಂದು ಮೈಸೂರು ಅರಮನೆ ಮಂಡಳಿಯಲ್ಲಿ ಸಚಿವರಾದ ಶಿವರಾಜ್ ತಂಗಡಗಿ ಹಾಗೂ ಹೆಚ್.ಸಿ ಮಹದೇವಪ್ಪ ಅವರು ಮೈಸೂರು ದಸರಾ ಪೋಸ್ಟರ್ ಮತ್ತು ವೆಬ್ ಸೈಟ್‌ನ್ನು ಬಿಡುಗಡೆ ಮಾಡಿದರು.

ಇದೆ ವೇಳೆ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಈ ಬಾರಿ ಸಾಂಪ್ರದಾಯಿಕ ದಸರಾ ಮಾಡಲು ತೀರ್ಮಾನ ಮಾಡಿದ್ದೇವೆ. 190ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದೇವೆ. ಹಾಗಾಗಿ ಈ ಬಾರಿ ಸಾಂಪ್ರದಾಯಿಕ ದಸರಾ ಮಾಡುವುದಕ್ಕೆ ತೀರ್ಮಾನ ಮಾಡಿದ್ದು, ಅ.15ರಂದು ಹಂಸಲೇಖ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ.

ಕಳೆದ ದಸರಾಗಿಂತ ಈ ಬಾರಿ ಕಡಿಮೆ ವೆಚ್ಚದ ದಸರಾ ಆಚರಣೆ ಮಾಡುತ್ತೇವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಇದಕ್ಕೋಸ್ಕರ 15 ಕೋಟಿ ಹಣ ಬಿಡುಗಡೆಯಾಗಿದೆ. ಈ ಬಾರಿ ಯುವದಸರಾ, ಯುವ ಸಂಭ್ರಮ, ಏರ್ ಶೋ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಇರುತ್ತದೆ. ಜೊತೆಗೆ ಈ ಬಾರಿ ಹೆಚ್ಚು ಪ್ರಾಯೋಜಕತ್ವದ ಮೂಲಕ ದಸರಾ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.

lokesh

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

2 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

3 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

5 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

6 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

7 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

7 hours ago