ಮೈಸೂರು : ಈ ಬಾರಿಯ ಮೈಸೂರು ದಸರಾ-2023 ಸಕಲ ಸಿದ್ಧತೆಗಳು ಆರಂಭವಾಗಿದ್ದು, ಜಂಬು ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳನ್ನು ಅಂತಿಮಗೊಳಿಸಲಾಗಿದೆ. ಕಳೆದ 15 ದಿನಗಳಿಂದ ದಸರಾದಲ್ಲಿ ಪಾಲ್ಗೊಳ್ಳಬೇಕಾದ ಆನೆಗಳ ಆರೋಗ್ಯ ತಪಾಸಣೆ ಮಾಡಿದ್ದು, ಇದೀಗ ಜಂಬು ಸವಾರಿಗೆ ಮೊದಲ ಹಂತದಲ್ಲಿ ಬರುವ 9 ಆನೆಗಳ ಪಟ್ಟಿಯನ್ನು ಅಧಿಕಾರಿಗಳು ಸಿದ್ಧಪಡಿಸಿದ್ದಾರೆ.
ನಿನ್ನೆ ಅರಣ್ಯಧಿಕಾರಿಗಳು ಸಭೆ ನಡೆಸಿ ಆನೆಗಳ ಪಟ್ಟಿ ಫೈನಲ್ ಮಾಡಿದ್ದು, ಮತ್ತೊಂದು ಸಭೆ ನಡೆಸಿ ಎರಡನೇ ಪಟ್ಟಿ ತಯಾರು ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಸೆಪ್ಟೆಂಬರ್ 1ರಂದು ಗಜಪಯಣದಲ್ಲಿ 9 ಆನೆಗಳು ವೀರನಹೊಸಹಳ್ಳಿಯಿಂದ ಅರಮನೆಗೆ ಆಗಮಿಸಲಿವೆ. ನಾಗರಹೊಳೆ ಆನೆ ಶಿಬಿರದಿಂದ ಅಭಿಮನ್ಯು, ಭೀಮ, ಮಹೇಂದ್ರ ಆಗಮಿಸುತ್ತಿದ್ದರೆ, ನಾಗರಹೊಳೆಯ ಬಳ್ಳೆ ಆನೆ ಶಿಬಿರದಿಂದ ಅರ್ಜುನ ಹಾಗೂ ದುಬಾರೆ ಆನೆ ಶಿಬಿರದಿಂದ ಧನಂಜಯ, ಗೋಪಿ, ವಿಜಯ ಆನೆಯನ್ನು ಅಂತಿಮಗೊಳಿಸಲಾಗಿದೆ. ಇನ್ನು ಬಂಡೀಪುರದ ರಾಮಪುರ ಶಿಬಿರದಿಂದ ಪಾರ್ಥ ಸಾರಥಿ, ಭೀಮನಕಟ್ಟೆ ಆನೆ ಶಿಬಿರದಿಂದ ವರಲಕ್ಷಿ ಆನೆ ಮೊದಲ ಹಂತದಲ್ಲಿ ಅರಮನೆಗೆ ಆಗಮಿಸಲಿವೆ.
ಸೆಪ್ಟೆಂಬರ್ 1ಕ್ಕೆ ಮೈಸೂರಿಗೆ ಗಜ ಪಡೆ ಆಗಮಿಸಲಿದ್ದು, ಮೈಸೂರು ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಗುತ್ತದೆ. ಇನ್ನು ಈ ಬಾರಿ 14 ಆನೆಗಳು ಗಜ ಪಯಣದ ಮೂಲಕ ಮೈಸೂರಿಗೆ ಆಗಮಿಸುತ್ತಿದ್ದು, ಹುಣಸೂರು ತಾಲ್ಲೂಕಿನ ವೀರನ ಹೊಸಹಳ್ಳಿಯಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತ ಮಾಡಲಾಗುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ಸಿ ಮಹದೇವಪ್ಪ ಕೆಳದಿನಗಳ ಹಿಂದೆ ಹೇಳಿದ್ದರು.
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ೨೦೨೫-೨೬ನೇ ಶೈಕ್ಷಣಿಕ ಸಾಲಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಮೈಸೂರು ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ…
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…