ಮೈಸೂರು

ಮೈಸೂರು ದಸರಾ-2023 : ಮೊದಲ ಹಂತದಲ್ಲಿ ಅರಮನೆಗೆ ಬರುವ ಗಜಪಡೆಯ ಪಟ್ಟಿ ಸಿದ್ದ

ಮೈಸೂರು : ಈ ಬಾರಿಯ ಮೈಸೂರು ದಸರಾ-2023 ಸಕಲ ಸಿದ್ಧತೆಗಳು ಆರಂಭವಾಗಿದ್ದು, ಜಂಬು ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳನ್ನು ಅಂತಿಮಗೊಳಿಸಲಾಗಿದೆ. ಕಳೆದ 15 ದಿನಗಳಿಂದ ದಸರಾದಲ್ಲಿ ಪಾಲ್ಗೊಳ್ಳಬೇಕಾದ ಆನೆಗಳ ಆರೋಗ್ಯ ತಪಾಸಣೆ ಮಾಡಿದ್ದು, ಇದೀಗ ಜಂಬು ಸವಾರಿಗೆ ಮೊದಲ ಹಂತದಲ್ಲಿ ಬರುವ 9 ಆನೆಗಳ ಪಟ್ಟಿಯನ್ನು ಅಧಿಕಾರಿಗಳು ಸಿದ್ಧಪಡಿಸಿದ್ದಾರೆ.

ನಿನ್ನೆ ಅರಣ್ಯಧಿಕಾರಿಗಳು ಸಭೆ ನಡೆಸಿ ಆನೆಗಳ ಪಟ್ಟಿ ಫೈನಲ್ ಮಾಡಿದ್ದು, ಮತ್ತೊಂದು ಸಭೆ ನಡೆಸಿ ಎರಡನೇ ಪಟ್ಟಿ ತಯಾರು ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್ 1ರಂದು ಗಜಪಯಣದಲ್ಲಿ 9 ಆನೆಗಳು ವೀರನಹೊಸಹಳ್ಳಿಯಿಂದ ಅರಮನೆಗೆ ಆಗಮಿಸಲಿವೆ. ನಾಗರಹೊಳೆ ಆನೆ ಶಿಬಿರದಿಂದ ಅಭಿಮನ್ಯು, ಭೀಮ, ಮಹೇಂದ್ರ ಆಗಮಿಸುತ್ತಿದ್ದರೆ, ನಾಗರಹೊಳೆಯ ಬಳ್ಳೆ ಆನೆ ಶಿಬಿರದಿಂದ ಅರ್ಜುನ ಹಾಗೂ ದುಬಾರೆ ಆನೆ ಶಿಬಿರದಿಂದ ಧನಂಜಯ, ಗೋಪಿ, ವಿಜಯ ಆನೆಯನ್ನು ಅಂತಿಮಗೊಳಿಸಲಾಗಿದೆ. ಇನ್ನು ಬಂಡೀಪುರದ ರಾಮಪುರ ಶಿಬಿರದಿಂದ ಪಾರ್ಥ ಸಾರಥಿ, ಭೀಮನಕಟ್ಟೆ ಆನೆ ಶಿಬಿರದಿಂದ ವರಲಕ್ಷಿ ಆನೆ ಮೊದಲ ಹಂತದಲ್ಲಿ ಅರಮನೆಗೆ ಆಗಮಿಸಲಿವೆ.

ಸೆಪ್ಟೆಂಬರ್ 1ಕ್ಕೆ ಮೈಸೂರಿಗೆ ಗಜ ಪಡೆ ಆಗಮಿಸಲಿದ್ದು, ಮೈಸೂರು ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಗುತ್ತದೆ. ಇನ್ನು ಈ ಬಾರಿ 14 ಆನೆಗಳು ಗಜ ಪಯಣದ ಮೂಲಕ ಮೈಸೂರಿಗೆ ಆಗಮಿಸುತ್ತಿದ್ದು, ಹುಣಸೂರು ತಾಲ್ಲೂಕಿನ ವೀರನ ಹೊಸಹಳ್ಳಿಯಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತ ಮಾಡಲಾಗುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್​ಸಿ ಮಹದೇವಪ್ಪ ಕೆಳದಿನಗಳ ಹಿಂದೆ ಹೇಳಿದ್ದರು.

lokesh

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

54 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

2 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

4 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

8 hours ago