ಮೈಸೂರು

ಮೈಸೂರು ದಸರಾ : ಮಾವುತ, ಕಾವಾಡಿಗಳಿಗೆ ಉಪಹಾರ ಬಡಿಸಿದ ಎಚ್.ಸಿ ಮಹದೇವಪ್ಪ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರ ಅಮಹೋತ್ಸವದ ಪ್ರಮುಖ ಆಕರ್ಷಣೆಯಾದ ದಸರಾ ಜಂಬೂಸವಾರಿ ಗಜಪಡೆಗಳ ಮಾವುತರು, ಕಾವಾಡಿಗಳು ಮತ್ತು ಕುಟುಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬೆಳಗಿನ ಉಹಾರ ಬಡಿಸುವ ಮೂಲಕ ಶುಭಹಾರೈಸಿದರು.

ಅರಮನೆ ಆವರಣದ ಜಯಮಾರ್ತಾಂಡ ದ್ವಾರದ ಬಳಿ ಶುಕ್ರವಾರ ಹಾಕಲಾಗಿದ್ದ ಪೆಂಡಾಲ್ ನಲ್ಲಿ ಮಾವುತರು, ಕಾವಾಡಿಗಳು ಮತ್ತು ಅವರ ಕುಟುಂಬದವರಿಗೆ ಇಡ್ಲಿ, ವಡೆ,ಚಟ್ನಿ, ಮಸಾಲೆ ದೋಸೆ, ಪೊಂಗಲ್, ಕೇಸರಿ ಬಾತ್, ಹೋಳಿಗೆ ಉಪ್ಪಿಟ್ಟನ್ನು ಬಡಿಸಲಾಯಿತು.

ಬಗೆ ಬಗೆಯ ತಿಂಡಿ ತಿನಿಸುಗಳನ್ನು ತಿಂದು ಮಾವುತ, ಕಾವಾಡಿಗಳು,ಮಕ್ಕಳು, ಸಂತಸ ಪಟ್ಟರು. ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ವೀರನಹೊಸಹಳ್ಳಿಯಿಂದ ಸೆ.1 ರಂದು ಅರಮನೆಗೆ ದಸರಾ ಗಜಪಡೆಗಳ ಮೊದಲ ತಂಡ ಆಗಮಿಸಿತ್ತು. ಎರಡನೇ ತಂಡ ಸೆ.25 ರಂದು ಆಗಮಿಸಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮತ್ತು ಅತಮನೆ ಮಂಡಳಿ ವತಿಯಿಂದ ಉಪಹಾರ ವ್ಯವಸ್ಥೆ ಮಾಡಿಕೊಂಡು ಬಂದಿರುವ ಮಾದರಿಯಲ್ಲಿ ಈ ವರ್ಷವೂ ಸಹ ಉಪಹಾರ ವ್ಯವಸ್ಥೆ ಮಾಡಲಾಗಿತ್ತು.

 

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago