ಮೈಸೂರು

ಮೈಸೂರು ದಸರಾ| ಅರಮನೆಯಲ್ಲಿ ಶರನ್ನವರಾತ್ರಿ ಆಚರಣೆ: ಈ ದಿನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ಮೈಸೂರು : ನಾಡಹಬ್ಬ ಸಮೀಪಿಸುತ್ತಿರುವ ಹಿನ್ನೆಲೆ ಮೈಸೂರು ಅರಮನೆಯಲ್ಲಿ ದಸರಾ ಆಚರಣೆ ಹಾಗೂ ಖಾಸಗಿ ದರ್ಬಾರ್‌ಗೆ ಸಿದ್ಧತೆ ಪ್ರಾರಂಭವಾಗಿದೆ. ರಾಜ ವಂಶಸ್ಥರ ಶರನ್ನವರಾತ್ರಿ ಆಚರಣೆಗಳು ಅರಮನೆಯಲ್ಲಿ ನಡೆಯುವುದರಿಂದ ಕೆಲ ದಿನಗಳಲ್ಲಿ ಸಾರ್ವಜನಿಕರಿಗೆ ಅರಮನೆ ಪ್ರವೇಶ ನಿರ್ಬಂಧ ಮಾಡಲಾಗಿದೆ ಎಂದು ಮೈಸೂರು ಅರಮನೆ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ ವಂಶಸ್ಥರ ಶರನ್ನವರಾತ್ರಿಯ ಸಾಂಪ್ರದಾಯಿಕ ಆಚರಣೆಯ ಹಿನ್ನೆಲೆಯಲ್ಲಿ ಅಕ್ಟೋಬರ್ 9 ರಂದು ರತ್ನ ಖಚಿತ ಸಿಂಹಾಸನ ಜೋಡಣೆ ನಡೆಯುವುದರಿಂದ ಬೆಳಗ್ಗೆ 10 ರಿಂದ ಮಧ್ಯಾಹ್ನದವರೆಗೆ ಅರಮನೆಗೆ ಪ್ರವಾಸಿಗರ ನಿರ್ಬಂಧ ವಿಧಿಸಲಾಗಿದೆ.

ಇದರ ಜೊತೆಗೆ, ಅಕ್ಟೋಬರ್ 15 ರಂದು ಶರನ್ನವರಾತ್ರಿಯ ಮೊದಲ ದಿನ ಖಾಸಗಿ ದರ್ಬಾರ್ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರಿಗೆ ಅರಮನೆಯ ಪ್ರವೇಶ ನಿರ್ಬಂಧಿಸಲಾಗಿದೆ. ಹಾಗೆಯೇ, ಅಕ್ಟೋಬರ್ 23 ರಂದು ಆಯುಧ ಪೂಜೆ ಇರುವುದರಿಂದ 10 ರಿಂದ 2 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಮಾಡಿ ಪ್ರಕಟಣೆ ಹೊರಡಿಸಲಾಗಿದೆ.

ಜಂಬೂ ಸವಾರಿಯ ಇಡೀ ದಿನ ಅರಮನೆ ಪ್ರವೇಶಕ್ಕೆ ನಿರ್ಬಂಧ : ಅಕ್ಟೋಬರ್ 24 ರ ವಿಜಯದಶಮಿ ದಿನ ಬೆಳಗ್ಗೆ ಅರಮನೆಯಲ್ಲಿ ಮೆರವಣಿಗೆ ನಡೆಯಲಿದ್ದು, ಆನಂತರ ಮಧ್ಯಾಹ್ನ ನಾಡಹಬ್ಬ ದಸರಾದ ಜಂಬೂ ಸವಾರಿ ಮೆರವಣಿಗೆ ಇರುವ ನಿಮಿತ್ತ ಇಡೀ ದಿನ ಪ್ರವಾಸಿಗರಿಗೆ ಅರಮನೆ ಪ್ರವೇಶ ನಿಷೇಧ ಮಾಡಲಾಗಿದೆ. ಪಾಸ್ ಇದ್ದವರು ಅರಮನೆಯ ಅಂಗಳದಲ್ಲಿ ಜಂಬೂ ಸವಾರಿ ವೀಕ್ಷಣೆ ಮಾಡಬಹುದು ಎಂದು ತಿಳಿಸಲಾಗಿದೆ.

ಇದರ ಜೊತೆಗೆ, ನವೆಂಬರ್ 8 ರಂದು ಸಿಂಹಾಸನ ವಿಸರ್ಜನೆ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ 2 ಗಂಟೆಯವರೆಗೆ ಅರಮನೆಯ ಪ್ರವೇಶವನ್ನು ನಿಷೇಧ ಮಾಡಲಾಗಿದೆ ಎಂದು ಅರಮನೆಯ ಆಡಳಿತ ಮಂಡಳಿಯ ಉಪ ನಿರ್ದೇಶಕ ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಒಟ್ಟಾರೆ, ರಾಜವಂಶಸ್ಥ ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ನಡೆಸುವ ರಾಜ ಪರಂಪರೆಯ ಶರನ್ನವರಾತ್ರಿಯ ಪೂಜಾ ಕಾರ್ಯಕ್ರಮಗಳಿಗೆ ಈಗಿನಿಂದಲೇ ತಯಾರಿ ಪ್ರಾರಂಭವಾಗಿದೆ. ರತ್ನಖಚಿತ ಸಿಂಹಾಸನ ಜೋಡಣೆ, ಖಾಸಗಿ ದರ್ಬಾರ್, ಅರಮನೆಯಲ್ಲಿ ಆಯುಧ ಪೂಜೆ ಹಾಗೂ ವಿಜಯದಶಮಿ ದಿನದಂದು ರಾಜ ಪರಂಪರೆಯಂತೆ ಶರನ್ನವರಾತ್ರಿಯ ಪೂಜಾ ಕಾರ್ಯ ನೆರವೇರಿಸಲಿದ್ದಾರೆ.

andolanait

Recent Posts

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

3 mins ago

ಖ್ಯಾತ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನ

ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…

7 mins ago

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

2 hours ago

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

2 hours ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

3 hours ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

3 hours ago